1:59 PM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 20 ಕೋಟಿ ವಿಶೇಷ ಪ್ಯಾಕೇಜ್: ಶಾಸಕ ಡಾ. ಭರತ್ ಶೆಟ್ಟಿ

31/12/2022, 23:51

ಮಂಗಳೂರು(reporterkarnataka.com); ಸಣ್ಣ ನೀರಾವರಿಯ 20 ಕೋಟಿ ರೂ. ವಿಶೇಷ ಪ್ಯಾಕೇಜಿನಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ವ್ಯಾಪ್ತಿಯ ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 1.30 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಇಲ್ಲಿನ ರಾಜಕಾಲುವೆಗೆ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್‌ ಅವರು ಕೃತಕ ನೆರೆ ಭೀತಿ ನಿವಾರಿಸುವ ಸಲುವಾಗಿ , ಚರಂಡಿ, ಕಾಲುವೆ, ತಡೆಗೋಡೆ, ರಸ್ತೆ ಮತ್ತಿತರ ಕಾಮಗಾರಿಗಾಗಿ 23 ಕೋ.ರೂ ವಿಶೇಷ ಅನುದಾನ ನೀಡಿದ್ದು ಅಗತ್ಯವಿದ್ದೆಡೆ ಕಾಮಗಾರಿ ನಡೆಸಲಾಗುವುದು.

ಕಳೆದ ಹಲವು ವರ್ಷಗಳಿಂದ ಇಲ್ಲಿ ಮಳೆಯ ಸಂದರ್ಭ ನೆರೆ ಅವರಿಸುತ್ತಿದ್ದು ಜನರ ಬೇಡಿಕೆಯಿತ್ತು. ಇದೀಗ ತಡೆಗೋಡೆ ಜತೆಗೆ ಇಲ್ಲಿನ ತಗ್ಗಾದ ಕಾಲು ಸಂಕಗಳನ್ನು ತೆಗೆದು ಎತ್ತರಿಸಲಾಗುವುದು ಎಂದರು.
ಒಳಭಾಗದ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಸೇರಿದಂತೆ ಅಂದಾಜು 1 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು.
ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ ಮಲರಾಯಸಾನ, ಜಯಪ್ರಕಾಶ್ ಕುಲಾಲ್, ರಾಜೇಶ್, ಸುರೇಶ್‌ ಭಂಡಾರಿ,ಕಿರಣ್ ಕೋಟ್ಯಾನ್, ಗೋಪಾಲ್ ಶೆಟ್ಟಿ ಗಣೇಶ್ ಶೆಟ್ಟಿ, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು