2:12 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 20 ಕೋಟಿ ವಿಶೇಷ ಪ್ಯಾಕೇಜ್: ಶಾಸಕ ಡಾ. ಭರತ್ ಶೆಟ್ಟಿ

31/12/2022, 23:51

ಮಂಗಳೂರು(reporterkarnataka.com); ಸಣ್ಣ ನೀರಾವರಿಯ 20 ಕೋಟಿ ರೂ. ವಿಶೇಷ ಪ್ಯಾಕೇಜಿನಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ವ್ಯಾಪ್ತಿಯ ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 1.30 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಇಲ್ಲಿನ ರಾಜಕಾಲುವೆಗೆ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್‌ ಅವರು ಕೃತಕ ನೆರೆ ಭೀತಿ ನಿವಾರಿಸುವ ಸಲುವಾಗಿ , ಚರಂಡಿ, ಕಾಲುವೆ, ತಡೆಗೋಡೆ, ರಸ್ತೆ ಮತ್ತಿತರ ಕಾಮಗಾರಿಗಾಗಿ 23 ಕೋ.ರೂ ವಿಶೇಷ ಅನುದಾನ ನೀಡಿದ್ದು ಅಗತ್ಯವಿದ್ದೆಡೆ ಕಾಮಗಾರಿ ನಡೆಸಲಾಗುವುದು.

ಕಳೆದ ಹಲವು ವರ್ಷಗಳಿಂದ ಇಲ್ಲಿ ಮಳೆಯ ಸಂದರ್ಭ ನೆರೆ ಅವರಿಸುತ್ತಿದ್ದು ಜನರ ಬೇಡಿಕೆಯಿತ್ತು. ಇದೀಗ ತಡೆಗೋಡೆ ಜತೆಗೆ ಇಲ್ಲಿನ ತಗ್ಗಾದ ಕಾಲು ಸಂಕಗಳನ್ನು ತೆಗೆದು ಎತ್ತರಿಸಲಾಗುವುದು ಎಂದರು.
ಒಳಭಾಗದ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಸೇರಿದಂತೆ ಅಂದಾಜು 1 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು.
ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ ಮಲರಾಯಸಾನ, ಜಯಪ್ರಕಾಶ್ ಕುಲಾಲ್, ರಾಜೇಶ್, ಸುರೇಶ್‌ ಭಂಡಾರಿ,ಕಿರಣ್ ಕೋಟ್ಯಾನ್, ಗೋಪಾಲ್ ಶೆಟ್ಟಿ ಗಣೇಶ್ ಶೆಟ್ಟಿ, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು