4:54 AM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಬಸ್ ನಲ್ಲಿ ದೊರಕಿದ್ದ ದುಬಾರಿ ಮೊಬೈಲ್‌: ಮಾಲೀಕರಿಗೆ ತಲುಪಿಸಿದ ಸಂಡೂರು ಮೂಲದ ದಂಪತಿ

01/01/2023, 11:44

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಸಾರಿಗೆ ಬಸ್ ನಲ್ಲಿ ಮರೆತು ಬಿಟ್ಟು ಹೋದ ದುಬಾರಿ ಬೆಲೆಯ ಮೊಬೈಲ್‌ ನ್ನು. ಸಾರಿಗೆ ಸಿಬ್ಬಂದಿ ಮೊಬೈಲ್‌ ಮಾಲೀಕರಿಗೆ ಸುರಕ್ಷಿತವಾಗಿ ತಲುಪಿಸುವ ಮೂಲಕ, ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮೆರೆದ ಪ್ರಸಂಗ ಜರುಗಿದೆ.

ಕಲ್ಯಾಣ ಕರ್ನಾಟಕ ಸಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕೂಡ್ಲಿಗಿ ಪಟ್ಟಣದ ಎಸ್ಡಿ ಎಮ್ಸಿ ತಾಲೂಕು ಘಟಕ ಅಧ್ಯಕ್ಷೆ ಹಾಗೂ ಪತ್ರಕರ್ತೆ ಡಿ.ಭಾಗ್ಯಮ್ಮ ಸೋಮುರವರು ಘಟನೆಗೆ ಸಾಕ್ಷಿಯಾಗಿದ್ದಾರೆ. ಅವರು ಕಳೆದೆರೆಡು ದಿನಗಳ ಹಿಂದೆಯಷ್ಟೇ ದಾವಣಗೆರೆಗೆ ತೆರಳಿ, ಮರುದಿನ ದಾವಣಗೆರೆ ಯಿಂದ ಕೂಡ್ಲಿಗಿ ಗೆ ಸಾರಿಗೆ ಬಸ್ ನಲ್ಲಿ ಹಿಂದಿರುಗಿ ಬಂದಿದ್ದಾರೆ.

ಕೂಡ್ಲಿಗಿ ಪಟ್ಟಣದಲ್ಲಿ ಬಸ್ ನಿಂದ ಕೆಳಗಿಳಿಯುವಾಗ ತಮ್ಮ ಮೊಬೈಲ್‌ ನ್ನು, ಅವರು ತಾವು ಕುಳಿತ ಬಸ್ ನ ಸೀಟ್ ನಲ್ಲಿಯೇ ಮರೆತು ಇಳಿದೋಗಿದ್ದಾರೆ. ನಂತರ ತಡವಾಗಿಯೇ ಮೊಬೈಲ್‌ ನ್ನು ಗಮನಿಸಿದ ಹತ್ತಿರದ ಸೀಟ್ ನಲ್ಲಿದ್ದ, ಸಹ ಪ್ರಯಾಣಿಕರಾದ ಸಂಡೂರು ಮೂಲದ ಅಪರಿಚಿತ ದಂಪತಿ ಭಾಗ್ಯಮ್ಮರವರ ಮೊಬೈಲ್‌ ನ್ನು ಬಸ್ ನಿರ್ವಾಹಕ ಹಾಗೂ ಚಾಲಕರಿಗೆ ತಲುಪಿಸಿದ್ದಾರೆ, ಕೂಡ್ಲಿಗಿ ಘಟಕದ ಸಿಬ್ಬಂದಿ ಮಾಲೀಕರಾದ ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದಾರೆ. ನಂತರ ಘಟಕ ದ ಕಚೇರಿಗೆ ತಮ್ಮ ಕರೆಸಿಕೊಂಡು ಮೊಬೈಲ್‌ನ್ನು ತಮಗೆ ತಲುಪಿಸಿರುವುದಾಗಿ ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಯಾಣಿಕರಾದ ಸಂಡೂರು ಮೂಲದ ಅಪರಿಚಿತ ದಂಪತಿ ಹಾಗೂ ಸಾರಿಗೆ ಘಟಕ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು