8:40 AM Friday30 - January 2026
ಬ್ರೇಕಿಂಗ್ ನ್ಯೂಸ್
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು