12:10 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು