7:58 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

50 ಲಕ್ಷ ರೂ. ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪನೆ: ಡಿಸಿಎಂ ಲಕ್ಷ್ಮಣ ಸವದಿ

13/05/2021, 15:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ವಸತಿ ಶಾಲೆಯಲ್ಲಿ ಸುಮಾರು 60 ಹಾಸಿಗೆಗಳುಳ್ಳ ಉಚಿತ ಕೋವಿಡ್ ಕೇರ್ ಸೆಂಟರ್ ಅನ್ನು ಪ್ರಾರಂಭಿಸುತ್ತಿದ್ದು ನಾಳೆಯಿಂದ ಅಧಿಕೃತವಾಗಿ ಚಾಲನೆ  ಆಗಲಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೊರೋನ ಮಹಾಮಾರಿಯಿಂದ ಹೊರಗಡೆ ಆಸ್ಪತ್ರೆಗಳಲ್ಲಿ ಬೆಡ್ ಆಕ್ಸಿಜನ್ ಸಿಗದೆ ತೊಂದರೆಗೀಡಾಗಿರುವಂತವರಿಗೆ 10 ಲೀಟರ್ ಹಾಗೂ 15 ಲೀಟರ್ ಸಾಮರ್ಥ್ಯವುಳ್ಳ 50  ಆಕ್ಸಿಜನ್ ಕಾನ್ಸಟ್ರೇಟರ್ ಗಳನ್ನು  ಈಗಾಗಲೇ ಖರೀದಿಸಲಾಗಿದೆ. ಇದು ನಾಳೆಯಿಂದ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

ಆಕ್ಸಿಜನ್  ಕಾನ್ಸಟ್ರೇಟರ್ ಕಿಟ್ ಜೊತೆಗೆ ಜ್ವರ ಪರೀಕ್ಷೆ ಮಾಡುವ ಥರ್ಮಾಮೀಟರ್, ಸ್ಯಾಚು ರೇಷನ್ ಹಾಗೂ ಪಲ್ಸ್ ಚೆಕ್ ಮಾಡುವ ಆಕ್ಸಮೀಟರ್ ಉಳ್ಳ ಕಿಟ್ ಗಳನ್ನು ಕೂಡ ನೀಡಲಾಗುತ್ತಿದೆ.

ಕೋವಿಡ್ ಅಂತ ಮಹಾಮಾರಿ ಇಂದಾಗಿ ಅಥಣಿಯ ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್ ಹಾಗೂ ಔಷಧೋಪಚಾರಗಳು ಸಿಗದೆ ಸಂಕಷ್ಟ ಪರಿಸ್ಥಿತಿಯಲ್ಲಿ ಇರುವ ಜನತೆಗೆ ಸುಸಜ್ಜಿತ   ಆಕ್ಸಿಜನ್  ಕಾನ್ಸಟ್ರೇಟರ್  ಹಾಗೂ ಬೆಡ್ ನೀಡುವ ಮೂಲಕ ಪ್ರಾಥಮಿಕ ಚಿಕಿತ್ಸೆ ನೀಡುವ ಮುಖೇನ ಅಳಿಲು ಸೇವೆ ಮಾಡುತ್ತಿರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಕೋರೋನ ಬಂದಿದೆ ಎಂದು  ಉದಾಸೀನತೆ ತೋರದೆ ಕೂಡಲೇ ಚಿಕಿತ್ಸೆ ಪಡೆಯಬೇಕು. ಯಾರು ಧೈರ್ಯಗೆಡಬಾರದು, ಭಯದಿಂದಾಗಿಯೇ ಅನೇಕ ಜನ ಜೀವ ತೆತ್ತಿರುವ ಉದಾಹರಣೆ ನಮ್ಮ ಕಣ್ಣಮುಂದಿದೆ  ಇದರಿಂದಾಗಿ ಜನತೆ ತಮ್ಮ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು