11:13 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

ಬೇಕಾಬಿಟ್ಟಿ ರಸ್ತೆ ಅಗೆದು ಯಾರಾದರು ಗುಂಡಿಗೆ ಬಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಗೇಲ್ ಅಧಿಕಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

04/01/2023, 21:25

ಮಂಗಳೂರು(reporterkarnataka.com): ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದ ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು, ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದರು.
ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು