10:17 PM Friday21 - November 2025
ಬ್ರೇಕಿಂಗ್ ನ್ಯೂಸ್
ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ

ಇತ್ತೀಚಿನ ಸುದ್ದಿ

ಬೇಕಾಬಿಟ್ಟಿ ರಸ್ತೆ ಅಗೆದು ಯಾರಾದರು ಗುಂಡಿಗೆ ಬಿದ್ರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ: ಗೇಲ್ ಅಧಿಕಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

04/01/2023, 21:25

ಮಂಗಳೂರು(reporterkarnataka.com): ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗೇಲ್ ಕಂಪೆನಿಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ನಗರದ ದೇರೆಬೈಲ್ ಕೊಂಚಾಡಿ ಬಳಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆಗೆ ಬಂದಿದ್ದ ಶಾಸಕರಲ್ಲಿ ಸ್ಥಳೀಯರು ಗೇಲ್ ಕಂಪೆನಿ ಅಧಿಕಾರಿಗಳು ಎಲ್ಲೆಂದರಲ್ಲಿ ರಸ್ತೆಯನ್ನು ಅಗೆಯುತ್ತಿದ್ದು, ಇದರಿಂದ ನೀರಿನ ಪೈಪ್ ಒಡೆದು ಸಮಸ್ಯೆ ಸೃಷ್ಟಿಯಾಗಿದೆ ಎನ್ನುವುದನ್ನು ಗಮನಕ್ಕೆ ತಂದರು. ಈ ವೇಳೆ ಸ್ಥಳದಲ್ಲೇ ಇದ್ದ ಕಂಪೆನಿ ಅಧಿಕಾರಿಗಳನ್ನು ಕರೆದ ಶಾಸಕರು, “ಪೈಪ್ ಲೈನ್ ಗಾಗಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ರಸ್ತೆ ಅಗೆದು ಜನರಿಗೆ ತೊಂದರೆ ಉಂಟುಮಾಡಿದರೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕಿಸ್ತೀನಿ ಎಂದರು.
ಬೇಕಾಬಿಟ್ಟಿ ಕಾಮಗಾರಿ ಮಾಡಬೇಡಿ, ಏನೇ ಮಾಡೋದಿದ್ರೂ ಸ್ಥಳೀಯ ಕಾರ್ಪೋರೇಟರ್ ಹಾಗೂ ಸಾರ್ವಜನಿಕರ ಗಮನಕ್ಕೆ ತಂದು ಬಳಿಕ ಮಾಡಿ. ನಿಮ್ಮಿಂದಾಗಿ ನಗರ ಪಾಲಿಕೆಯ ಎಲ್ಲಾ ಕಡೆಗಳಲ್ಲಿ ಸಮಸ್ಯೆಯಾಗುತ್ತಿದೆ. 10-15 ದಿನಗಳು ನೀರಿಲ್ಲದಿದ್ದರೆ ಜನರು ಏನು ಮಾಡಬೇಕು? ಅಲ್ಲಲ್ಲಿ ಅಗೆದು ಗುಂಡಿಯನ್ನು ಹಾಗೇ ಬಿಟ್ಟಿದ್ದೀರಿ. ನನ್ನ ಕ್ಷೇತ್ರದಲ್ಲಿ ಒಬ್ಬ ದ್ವಿಚಕ್ರ ಸವಾರರು ಗುಂಡಿಗೆ ಬಿದ್ದು ಅನಾಹುತ ಆದ್ರೂ ಸುಮ್ಮನಿರಲ್ಲ. ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಜೈಲಿಗೆ ಹಾಕ್ತೀನಿ ಎಂದು ಎಚ್ಚರಿಕೆ ನೀಡಿದರು. ಈ ವೇಳೆ ಕಂಪೆನಿ ಅಧಿಕಾರಿ ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು