12:59 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯರೇ, ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ: ಚಿಕ್ಕಮಗಳೂರಿನಲ್ಲಿ ಸಿ.ಟಿ. ರವಿ

04/01/2023, 21:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿ ಇಲ್ಲ. ನಾಯಿಯಂತೆ ಬಾಲ ಅಲ್ಲಾಡಿಸಿ ಕುಂಯಿ…ಕುಂಯಿ.. ಅಂತ ಬರೋದು ಕಾಂಗ್ರೆಸ್ ಕಲ್ಚರ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ಸಿಗರು ಯಾವ ಪದ ಬಳಸಿದ್ದಾರೋ ಅದು ಕಾಂಗ್ರೆಸ್ಸಿಗೆ ಅನ್ವಯವಾಗುತ್ತೆ. ಕಾಂಗ್ರೆಸ್ಸಿನಲ್ಲಿ ಮಾತ್ರ ಮುಖ್ಯಮಂತ್ರಿಯನ್ನ ಆ ರೀತಿ ನಡೆಸಿಕೊಳ್ಳುವುದು ಎಂದು ಬಯಧವಾರ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

ಮುಖ್ಯಮಂತ್ರಿಗಳನ್ನ ಬಾಲ ಅಲುಗಾಡಿಸುವಂತೆ ನೋಡಿಕೊಳ್ಳುತ್ತಿದ್ದದ್ದು ಕಾಂಗ್ರೆಸ್ ಮಾತ್ರ. ವೀರೇಂದ್ರ ಪಾಟೀಲ್ ರಾಜ್ಯ ಕಂಡ ಅಪರೂಪದ, ಪ್ರಭಾವಿ ನಾಯಕ. ಅವರು ಆಸ್ಪತ್ರೆಯಲ್ಲಿದ್ದಾಗ ನೋಡಿಕೊಂಡು ಹೋಗಿ ರಾಜೀವ್ ಗಾಂಧಿ ಏರ್‍ಪೋರ್ಟ್‍ನಲ್ಲಿ ಪದಚ್ಯುತಿಗೊಳಿಸಿದ್ದರು ಎಂದು ಸಿ.ಟಿ. ರವಿ ಖಾರವಾಗಿ ನುಡಿದರು.

ಮುಖ್ಯಮಂತ್ರಿ ಆಡಳಿತ ಪಾಲುದಾರರು ಎಂದು ಪ್ರಧಾನಿ ಭಾವಿಸುತ್ತಾರೆ. ಕಾಂಗ್ರೆಸ್ ಕಲ್ಚರ್ ಬಿಜೆಪಿಯಲ್ಲಿದೆ ಎಂದು ಸಿದ್ದರಾಮಯ್ಯ ಭಾವಿಸಿರಬಹುದು, ಅದು ತಪ್ಪು ಕಲ್ಪನೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು