2:02 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ

05/01/2023, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್ಚದೇ ಇರುವುದೇ ಶವ ಶೋಧ ಕಾರ್ಯ ವಿಳಂಬವಾಗಲು ಕಾರಣವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕ ನಗರ ಪೊಲೀಸರು ಮೂಡಿಗೆರೆಯ ಸಾಮಾಜಿಕ ಸಕ್ರೀಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಪ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹಲವೆಡೆ ಇಂಚಿಂಚು ಶೋಧ ಕಾರ್ಯಾಚರಣೆ ನಡೆಸಿ ಶವ ಹಾಕಿದ್ದ ಗೋಣಿಚೀಲ ಶೋಧಿಸಿದರೂ ಶವ ಸಿಗದೇ ಕರೆ ತಂದಿದ್ದ ಇಬ್ಬರು ಆರೋಪಿಗಳನ್ನು ವಾಪಾಸ್ ಕರೆದುಕೊಂಡು ಹೋಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಶೋಧ ಕಾರ್ಯದಲ್ಲಿ ಸ್ಥಳೀಯ ಎರಡು ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಕೈಜೋಡಿಸಿದ್ದರು.ಅವರೆಲ್ಲರ ಸಹಕಾರವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಸಿಪಿ ರಾಜೇಂದ್ರ ಹಾಗೂ ಅವರ ವಿಶೇಷ ಪೊಲೀಸ್ ತಂಡದವರು ಅಭಿನಂದಿಸಿದರು.
ಶವ ಶೋಧ ಕಾರ್ಯಾಚರಣೆಯಲ್ಲಿ ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ,ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಚೈತನ್ಯ,ಅಶೋಕನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಿ.ಎ.ಅಶ್ವಿನಿ, ಸಹಾಯಕ ಇನ್ ಸ್ಪೆಕ್ಟರ್ ಹರಿಚಂದ್ರ, ಎಎಸೈಐ ರೇಣುಕಾ, ಪೊಲೀಸ್ ಸಿಬ್ಬಂದಿಗಳಾದ ನಂದೀಶ್, ವಸಂತ, ಜಾಕೀರ್, ಲೋಕೇಶ್, ಸೋಮು ಲಮಾಣಿ, ಪ್ರಮೋದ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು