6:10 AM Tuesday31 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಶವ ಶೋಧಕ್ಕೆ ತೆರೆ: ಬರಿಗೈಯಲ್ಲಿ ವಾಪಸಾದ ಬೆಂಗಳೂರು ಪೊಲೀಸ್ ತಂಡ

05/01/2023, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಎಸೆದಿದ್ದ ಎಚ್.ಶರತ್ ಅವರ ಶವದ ಶೋಧವನ್ನು ಮುಂದುವರೆಸಿದ್ದ ಪೊಲೀಸರು ಗುರುವಾರವೂ ಶೋಧ ಕಾರ್ಯ ನಡೆಸಿ ಶವ ಸಿಗದೇ ಶೋಧ ಕಾರ್ಯಕ್ಕೆ ತೆರೆ ಎಳೆದು ಕರೆ ತಂದಿದ್ದ ಆರೋಪಿಗಳ ಜತೆ ಬೆಂಗಳೂರಿಗೆ ರಾತ್ರಿ ಪ್ರಯಾಣ ಬೆಳೆಸಿದರು.

ಆರೋಪಿಗಳು ಶವ ಎಸೆದ ಜಾಗವನ್ನು ಗುರುತು ಹಚ್ಚದೇ ಇರುವುದೇ ಶವ ಶೋಧ ಕಾರ್ಯ ವಿಳಂಬವಾಗಲು ಕಾರಣವಾಯಿತು. ಮೂರು ದಿನ ಕಬ್ಬನ್ ಪಾರ್ಕ್ ಮತ್ತು ಅಶೋಕ ನಗರ ಪೊಲೀಸರು ಮೂಡಿಗೆರೆಯ ಸಾಮಾಜಿಕ ಸಕ್ರೀಯ ಕಾರ್ಯಕರ್ತರು, ಸಮಾಜ ಸೇವಕ ಮೊಹಮ್ಮದ್ ಆರೀಪ್ ಹಾಗೂ ಸ್ಥಳೀಯರ ಸಹಕಾರದಿಂದ ಚಾರ್ಮಾಡಿ ಅಣ್ಣಪ್ಪ ಸ್ವಾಮಿ ದೇವಸ್ಥಾನದಿಂದ ಮುಂದಿನ ಪ್ರಪಾತ, ಸೋಮನಕಾಡು ಹಾಗೂ ದಕ್ಷಿಣ ಕನ್ನಡ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಹಲವೆಡೆ ಇಂಚಿಂಚು ಶೋಧ ಕಾರ್ಯಾಚರಣೆ ನಡೆಸಿ ಶವ ಹಾಕಿದ್ದ ಗೋಣಿಚೀಲ ಶೋಧಿಸಿದರೂ ಶವ ಸಿಗದೇ ಕರೆ ತಂದಿದ್ದ ಇಬ್ಬರು ಆರೋಪಿಗಳನ್ನು ವಾಪಾಸ್ ಕರೆದುಕೊಂಡು ಹೋಗಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಶೋಧ ಕಾರ್ಯದಲ್ಲಿ ಸ್ಥಳೀಯ ಎರಡು ಜಿಲ್ಲಾ ವ್ಯಾಪ್ತಿಯ ಪತ್ರಕರ್ತರು ಕೈಜೋಡಿಸಿದ್ದರು.ಅವರೆಲ್ಲರ ಸಹಕಾರವನ್ನು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಎಸಿಪಿ ರಾಜೇಂದ್ರ ಹಾಗೂ ಅವರ ವಿಶೇಷ ಪೊಲೀಸ್ ತಂಡದವರು ಅಭಿನಂದಿಸಿದರು.
ಶವ ಶೋಧ ಕಾರ್ಯಾಚರಣೆಯಲ್ಲಿ ಕಬ್ಬನ್ ಪಾರ್ಕ್ ಎಸಿಪಿ ರಾಜೇಂದ್ರ,ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ಚೈತನ್ಯ,ಅಶೋಕನಗರ ಪೊಲೀಸ್ ಠಾಣೆಯ ಸಬ್ ಇನ್ ಸ್ಪೆಕ್ಟರ್ ಜಿ.ಎ.ಅಶ್ವಿನಿ, ಸಹಾಯಕ ಇನ್ ಸ್ಪೆಕ್ಟರ್ ಹರಿಚಂದ್ರ, ಎಎಸೈಐ ರೇಣುಕಾ, ಪೊಲೀಸ್ ಸಿಬ್ಬಂದಿಗಳಾದ ನಂದೀಶ್, ವಸಂತ, ಜಾಕೀರ್, ಲೋಕೇಶ್, ಸೋಮು ಲಮಾಣಿ, ಪ್ರಮೋದ್ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು