6:24 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ದಾವಣಗೆರೆಯಲ್ಲಿ ರಸ್ತೆ ಅಪಘಾತ: ನಾವುಂದದ ಛಾಯಾಗ್ರಾಹಕ ಹಾಗೂ ಪುತ್ರನಿಗೆ ತೀವ್ರ ಗಾಯ

05/07/2021, 19:37

ದಾವಣಗೆರೆ (reporterkarnataka news): ದಾವಣಗೆರೆಯಲ್ಲಿ ಸೋಮವಾರ ನಡೆದ ರಸ್ತೆ ಅಪಘಾತದಲ್ಲಿ ನಾವುಂದದ ಛಾಯಾಗ್ರಾಹಕ ಅಶೋಕ್ ಶೆಟ್ಟಿ ಹಾಗೂ ಅವರ ಪುತ್ರ ಪನ್ನಗ ಶೆಟ್ಟಿ ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಕಂಟೈನರ್ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಮುಂಜಾನೆ ಸುಮಾರು 3 ಗಂಟೆಗೆ ಅಪಘಾತ ಸಂಭವಿಸಿದ್ದು, ಕಾರನ್ನು ಪನ್ನಗ ಶೆಟ್ಟಿ ಚಲಾಯಿಸುತ್ತಿದ್ದರು. ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತ್ತಿದ್ದ ಕುಮಾರ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ನಾವುಂದದ ಮಾನಸ ಸ್ಟುಡಿಯೋ ಮಾಲಕರಾಗಿರುವ ಅಶೋಕ್ ಕುಮಾರ್ ಶೆಟ್ಟಿ ಮದುವೆ ಕಾರ್ಯಕ್ರಮವೊಂದರ ಚಿತ್ರೀಕರಣ ಮುಗಿಸಿ ಮಗನ ಜತೆ ವಾಪಸ್ ಊರಿಗೆ ಬರುತ್ತಿದ್ದರು. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು