11:55 PM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ: ಜಿಲ್ಲೆಯ 8 ಕ್ಷೇತ್ರದಲ್ಲೂ ಸ್ಪರ್ಧೆ

07/01/2023, 11:03

ಮಂಗಳೂರು(reporterkarnataka.com): ಜೆಡಿಎಸ್ ಪಂಚರತ್ನ ಯಾತ್ರೆ ಫೆಬ್ರವರಿ ತಿಂಗಳಿನಲ್ಲಿ ದಕ್ಷಿಣ ಕನ್ನಡಕ್ಕೆ ಆಗಮಿಸಲಿದೆ ಎಂದು ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಾಕೆ ಮಾಧವಗೌಡ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ವಾಹನ ಜಾಗೃತಿ ಜಾಥಾ ನಡೆಸಲಾಗುತ್ತಿದೆ. ರಾಜ್ಯದಲ್ಲಿ 123 ಸ್ಥಾನಗಳನ್ನು ಗೆದ್ದು ಸರ್ಕಾರ ರಚಿಸುವ ಗುರಿಯನ್ನು ಜೆಡಿಎಸ್ ಹೊಂದಿದೆ. ಜೆಡಿಎಸ್‌ನ ಪಂಚರತ್ನ ಯೋಜನೆಯು ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ, ವಸತಿ ಮತ್ತು ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ ಎಂದು ನುಡಿದರು.

ದಕ್ಷಿಣ ಕನ್ನಡದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಸಭೆ ನಡೆಸಿ ಎರಡರಿಂದ ಮೂರು ಹೆಸರನ್ನು ಚುನಾವಣೆಗೆ ಸ್ಪರ್ಧಿಸಲು ಆಯ್ಕೆ ಮಾಡುತ್ತಿದ್ದೇವೆ. ಅಭ್ಯರ್ಥಿಗಳ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಜನರು ಪಕ್ಷದ ಬಗ್ಗೆ ಅಭಿಮಾನ ಹೊಂದಿದ್ದಾರೆ ಎಂದರು.

ದ.ಕ.ಘಟಕದ ಪದಾಧಿಕಾರಿಗಳನ್ನು ಪುನರ್ ರಚಿಸಲಾಗಿದೆ. ಸುಶೀಲ್ ನೊರೊನ್ಹಾ (ವಕ್ತಾರರು), ನಜೀರ್ ಉಳ್ಳಾಲ್ (ಕಾರ್ಯಾಧ್ಯಕ್ಷರು), ವಸಂತ ಪೂಜಾರಿ (ಕಾರ್ಯಾಧ್ಯಕ್ಷರು), ಇಕ್ಬಾಲ್ ಅಹ್ಮದ್ ಮುಲ್ಕಿ (ಕಾರ್ಯಾಧ್ಯಕ್ಷರು), ಪ್ರವೀಣ್ ಚಂದ್ರ ಜೈನ್ (ಹಿರಿಯ ಉಪಾಧ್ಯಕ್ಷರು), ಅಜೀಜ್ ಕುದ್ರೋಳಿ (ಉಪಾಧ್ಯಕ್ಷರು) ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು