5:27 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು