1:19 AM Sunday15 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಜಿಪಿಎಲ್ ಉತ್ಸವ – 2023 ಆಮಂತ್ರಣ ಪತ್ರಿಕೆ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಧೋನಿ ಬಿಡುಗಡೆ

08/01/2023, 18:54

ಮಂಗಳೂರು(reporterkarnataka.com): ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಬಹುನಿರೀಕ್ಷಿತ ಜಿಪಿಎಲ್ ಉತ್ಸವ – 2023 ಇದರ ಆಮಂತ್ರಣ ಪತ್ರಿಕೆಯನ್ನು ಭಾರತೀಯ ಕ್ರಿಕೆಟ್ ತಂಡ ಯಶಸ್ವಿ ನಾಯಕ ಎಂದೇ ಕರೆಸಿಕೊಂಡಿರುವ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿ ಅವರು ನಗರದಲ್ಲಿ ಶನಿವಾರ ಬಿಡುಗಡೆಗೊಳಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕರೂ, ಜಿಪಿಎಲ್ ಉತ್ಸವದ ಪ್ರಮುಖರೂ ಆದ ವೇದವ್ಯಾಸ ಕಾಮತ್ ಅವರು ಫೆಬ್ರವರಿ 10, 11, 12 ರಂದು ಅಡ್ಯಾರ್ ನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಚ್ಚಹಸುರಿನ ಸುಂದರ ಕ್ರೀಡಾಂಗಣದಲ್ಲಿ ನಡೆಯುವ ಜಿಪಿಎಲ್ ಉತ್ಸವಕ್ಕೆ ಧೋನಿ ಅವರನ್ನು ಆಮಂತ್ರಿಸಿದರು. ಜಿಪಿಎಲ್ ಟ್ರೋಫಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಧೋನಿಯವರು ಭಾಗವಹಿಸುವ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ವೇದವ್ಯಾಸ ಕಾಮತ್ ಅವರೊಂದಿಗೆ ಜಿಪಿಎಲ್ ಉತ್ಸವದ ಆಯೋಜಕರಾದ ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಕೊಂಚಾಡಿ ಗುರುಪ್ರಸಾದ್ ಕಾಮತ್, ಕಾನೆಂಗಾಡ್ ಗುರುಪ್ರಸಾದ್ ಕಾಮತ್ ಉಪಸ್ಥಿತರಿದ್ದರು.


7 ನೇ ವರ್ಷದ ಜಿಪಿಎಲ್ ಉತ್ಸವ- 2023 ಈ ಬಾರಿಯೂ ವಿಶೇಷ ಹಬ್ಬದಂತೆ ಆಯೋಜಿಸಲಾಗುತ್ತಿದ್ದು, ಕ್ರಿಕೆಟ್ ಪಂದ್ಯಾಟಗಳೊಂದಿಗೆ ಹೆಲಿಕಾಪ್ಟರ್ ರೌಂಡ್, ಬೋಟಿಂಗ್, ಕಿಡ್ಸ್ ಝೋನ್, ಮೂರು ಮುತ್ತು ತಂಡದಿಂದ ನಾಟಕ ಪ್ರದರ್ಶನ, ಬೊಂಬೆಯಾಟ, ವಾಯ್ಸ್ ಆಫ್ ಜಿಎಸ್ ಬಿ ಅಡಿಶನ್, ವೆರೈಟಿ ಎಂಟರ್ ಟೇನ್ ಮೆಂಟ್, ಫುಡ್ ಕೋರ್ಟ್ ಸಹಿತ ಹಲವಾರು ಆಕರ್ಷಣೆಗಳನ್ನು ಒಳಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು