6:01 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ

08/01/2023, 19:12

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ, ನಮ್ಮ ಕಾರ್ಖಾನೆಗೆ ಇಲ್ಲಿಂದ ಕಬ್ಬು ಬರುವುದರಿಂದ ರೈತರಿಗೆ ಅನುಕೂಲ ಆಗಲಿ ಎಂದು ದರೂರ್ ಶಾಖೆಯನ್ನು ಪ್ರಾರಭಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳಬೇಕು ಎಂದರು.

ನಂತರ ಮಾತನಾಡಿದ ಲಕ್ಷ್ಮಣ ಸಂಗಪ್ಪ ಸವದಿ ಅವರು, ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಸಾಗುತ್ತಿರುವ ಈ ಸಹಕಾರಿ ಬ್ಯಾಂಕಿಗೆ ಜನರ ಅಪಾರ ನಂಬಿಕೆ ಇದ್ದು ಈ ಸಹಕಾರಿ ಸಾಮಿತ್ಯದ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಮತ್ತು ಕೆ ಎಲ್ ಇ ಸಂಸ್ಥೆಯು ಕರ್ನಾಟಕ ಮಾತ್ರ ಸೀಮಿತವಾಗಿ ಇರದೇ ಹೊರ ದೇಶಕ್ಕೆ ತನ್ನ ಅಂಗ ಸಂಸ್ಥೆಗಳನ್ನು ರಚಿಸಿ ದೇಶವ್ಯಾಪಿ ಹೆಸರು ಮಾಡಿದೆ ಎಂದು ಹಾರೈಸಿದರು‌.
ದೇಶದಲ್ಲಿ ಏತನಾಲ್ ಉತ್ಪಾದನೆ ಹೆಚ್ಚಾಗುವುದರಿಂದ ಮುಂಬರುವ ದಿನಗಳಲ್ಲಿ ಕಬ್ಬು ಭತ್ತ, ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ದೊರೆಯಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದರು.


ಇದೇ ವೇಳೆ ಲಕ್ಷ್ಮಣ ಸಂಗಪ್ಪ ಸವದಿ, ಅಮಿತ ಪ್ರಭಾಕರ ಕೋರೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನಿ ಹೊಸದೆಹಲಿ ಸಿದಗೊಂಡ ಭೀ. ಗುಮತಾಜ ಪ್ರಧಾನ ವ್ಯವಸ್ಥಾಪಕರು
ಹಾಗೂ ದಿಗ್ಧರ್ಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಮಸ್ತ ದರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು