1:51 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ 4ನೇ ದರೂರ ಶಾಖೆ ಉದ್ಘಾಟನೆ

08/01/2023, 19:12

ರಾಹುಲ್ ಅಥಣಿ ಬೆಳಗಾವಿ

info.reporter Karnataka@gmail.com

ಡಾ. ಪ್ರಭಾಕರ ಕೋರೆ ಕ್ರೆಡಿಟ್ ಸೌಹಾರ್ದ ಸಹಕಾರಿ ಅಂಕಲಿ 49 ನೇ ದರೂರ ಶಾಖೆ ಉದ್ಘಾಟನೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸಂಗಪ್ಪ ಸವದಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಮಾತನಾಡಿದ ಅಮಿತ ಪ್ರಭಾಕರ ಕೋರೆ, ನಮ್ಮ ಕಾರ್ಖಾನೆಗೆ ಇಲ್ಲಿಂದ ಕಬ್ಬು ಬರುವುದರಿಂದ ರೈತರಿಗೆ ಅನುಕೂಲ ಆಗಲಿ ಎಂದು ದರೂರ್ ಶಾಖೆಯನ್ನು ಪ್ರಾರಭಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳಬೇಕು ಎಂದರು.

ನಂತರ ಮಾತನಾಡಿದ ಲಕ್ಷ್ಮಣ ಸಂಗಪ್ಪ ಸವದಿ ಅವರು, ಪ್ರಭಾಕರ ಕೋರೆ ಅವರ ನೇತೃತ್ವದಲ್ಲಿ ಸಾಗುತ್ತಿರುವ ಈ ಸಹಕಾರಿ ಬ್ಯಾಂಕಿಗೆ ಜನರ ಅಪಾರ ನಂಬಿಕೆ ಇದ್ದು ಈ ಸಹಕಾರಿ ಸಾಮಿತ್ಯದ ಬ್ಯಾಂಕ್ ಎತ್ತರಕ್ಕೆ ಬೆಳೆಯಲಿ ಮತ್ತು ಕೆ ಎಲ್ ಇ ಸಂಸ್ಥೆಯು ಕರ್ನಾಟಕ ಮಾತ್ರ ಸೀಮಿತವಾಗಿ ಇರದೇ ಹೊರ ದೇಶಕ್ಕೆ ತನ್ನ ಅಂಗ ಸಂಸ್ಥೆಗಳನ್ನು ರಚಿಸಿ ದೇಶವ್ಯಾಪಿ ಹೆಸರು ಮಾಡಿದೆ ಎಂದು ಹಾರೈಸಿದರು‌.
ದೇಶದಲ್ಲಿ ಏತನಾಲ್ ಉತ್ಪಾದನೆ ಹೆಚ್ಚಾಗುವುದರಿಂದ ಮುಂಬರುವ ದಿನಗಳಲ್ಲಿ ಕಬ್ಬು ಭತ್ತ, ಮೆಕ್ಕೆಜೋಳಕ್ಕೆ ಉತ್ತಮ ಬೆಲೆ ದೊರೆಯಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದರು.


ಇದೇ ವೇಳೆ ಲಕ್ಷ್ಮಣ ಸಂಗಪ್ಪ ಸವದಿ, ಅಮಿತ ಪ್ರಭಾಕರ ಕೋರೆ, ಚಿದಾನಂದ ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಚಿಕ್ಕೋಡಿ
ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನಿ ಹೊಸದೆಹಲಿ ಸಿದಗೊಂಡ ಭೀ. ಗುಮತಾಜ ಪ್ರಧಾನ ವ್ಯವಸ್ಥಾಪಕರು
ಹಾಗೂ ದಿಗ್ಧರ್ಶಕರು, ಸದಸ್ಯರು, ಸಿಬ್ಬಂದಿ ವರ್ಗ, ಸಮಸ್ತ ದರೂರು ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು