9:56 PM Saturday15 - November 2025
ಬ್ರೇಕಿಂಗ್ ನ್ಯೂಸ್
ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್…

ಇತ್ತೀಚಿನ ಸುದ್ದಿ

‘ಐ ಲವ್ ಕುಡ್ಲ’ ಕಲಾಕೃತಿಯ ಲೋಕಾರ್ಪಣೆ: ಜಸ್ಟಿಸ್ ಸಂತೋಷ್ ಹೆಗ್ಡೆ ಅನಾವರಣ

08/01/2023, 22:21

ಮಂಗಳೂರು(reporterkarnataka.com): ಮಂಗಳೂರು ರಾಮಕೃಷ್ಣ ಮಠದ ಪ್ರೇರಣೆಯಿಂದ ಮುನ್ನಡೆಯುತ್ತಿರುವ ಸ್ವಚ್ಛ ಮಂಗಳೂರು ಫೌಂಡೇಶನ್ ವತಿಯಿಂದ ‘ಐ ಲವ್ ಕುಡ್ಲ’ ಎಂಬ ಕಲಾಕೃತಿಯನ್ನು ನಗರದ ಹಂಪನಕಟ್ಟೆಯಲ್ಲಿ
ಅನಾವರಣಗೊಳಿಸಲಾಯಿತು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶರ ಹಾಗೂ ಮಾಜಿ ಲೋಕಾಯುಕ್ತ ಜಸ್ಟಿಸ್ ಎನ್. ಸಂತೋಷ್ ಹೆಗ್ಡೆ ಅವರು ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಮಾನವನ ಅತಿ ಆಸೆಯೇ ಎಲ್ಲಾ ರೀತಿಯ ಪ್ರಕೃತಿನಾಶ ಹಾಗೂ ತ್ಯಾಜ್ಯ ಉತ್ಪತ್ತಿಗೆ ಕಾರಣವಾಗಿದೆ. ಸಂಪನ್ಮೂಲಗಳನ್ನು ಬೇಕಾದಷ್ಟೇ ಬಳಸಿದರೆ ಕಸದ ಹೊರೆ ಕಡಿಮೆಯಾಗುತ್ತದೆ. ಸ್ವಚ್ಛತೆಯನ್ನು ಸಾಧಿಸುವಲ್ಲಿಯೂ ಈ ಕಡಿಮೆ ಬಳಕೆಯ ಮಂತ್ರವನ್ನು ಪಾಲಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟರು.

ಮಹತ್ವಾಕಾಂಕ್ಷೆಯಿರುವುದು ತಪ್ಪಲ್ಲ ಆದರೆ ಹಣ, ವಸ್ತುಗಳನ್ನು ಹಾಗೂ ಸೇವೆಗಳನ್ನು ಪಡೆಯಲು ಯಾರನ್ನೂ ನೋಯಿಸದೇ ಇರುವುದೇ ನೈಜ ನಾಗರೀಕನ ಧರ್ಮ ಎಂದರು.
ಸ್ವಾರ್ಥರಹಿತ ಹಾಗೂ ಜವಾಬ್ದಾರಿಯುತ ನಾಗರಿಕರಿಂದ ಸ್ವಚ್ಛ ಸಮಾಜದ ನಿರ್ಮಾಣ ಸಾಧ್ಯ ಎಂದರು.

ಇನ್ನೋರ್ವ ಅತಿಥಿಗಳಾದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಪಿ. ಸುಬ್ರಮಣ್ಯ ಯಡಪಡಿತ್ತಾಯ ಮಾತನಾಡಿ, ಮಂಗಳೂರಿನ ರಾಮಕೃಷ್ಣ ಆಶ್ರಮದ ಸ್ವಚ್ಛತಾ ಅಭಿಯಾನದ ಯಶಸ್ಸನ್ನು ಶ್ಲಾಘಿಸಿದರು. ಹಲವಾರು ಕಾರ್ಯಕರ್ತರ ಸ್ವಾರ್ಥ ರಹಿತ ಸೇವೆಯಿಂದ ಇಂಥಹಾ ಸಾಧನೆ ಸಾಧ್ಯವಾಗಿದೆ. ಎಲ್ಲಿ ಬದ್ದತೆ ಮತ್ತು ಸೇವೆ ಇರುತ್ತದೆಯೋ ಅಲ್ಲಿ ಮಹತ್ಕಾರ್ಯಗಳು ಆಗುತ್ತವೆ ಎಂದರು.

ರಾಮಕೃಷ್ಣ ಮಠದ ಸ್ವಾಮಿ ರಘು ರಾಮಾನಂದಜಿ, ಸಭಾ ಕಾರ್ಯಕ್ರಮ ಉದ್ಘಾಟಿಸಿ, ಆಶೀರ್ವಚನ ನೀಡಿದರು.
ಹಲವರ ಪ್ರಯತ್ನದ ಪರಿಣಾಮವಾಗಿರುವ ಸ್ವಚ್ಛ ಮಂಗಳೂರು ಅಭಿಯಾನ ಮುಂಬರುವ ದಿನಗಳಲ್ಲಿ ಇನ್ನಷ್ಟು ಉತ್ತಮ ರೀತಿಯಲ್ಲಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ಕರ್ನಾಟಕ ವಿಧಾನ ಪರಿಷತ್ ಮಾಜಿ ಸದಸ್ಯ ಹಾಗು ಸ್ವಚ್ಚ ಮಂಗಳೂರು ಫೌಂಡೇಶನ್ ನ ಮಾರ್ಗದರ್ಶಕರಾದ ಕ್ಯಾ. ಗಣೇಶ್ ಕಾರ್ಣಿಕ್ ಆಶಯ ಭಾಷಣ ಮಾಡಿ ಸ್ವಾಗತಿಸಿದರು.

ಸ್ವಚ್ಛ ಮಂಗಳೂರು ಫೌಂಡೇಶನ್ ನ ಅಧ್ಯಕ್ಷ ಉಮನಾಥ ಕೋಟೇಕಾರ್ ವೇದಿಕೆಯಲ್ಲಿ ಉಸ್ಥಿತರಿದ್ದರು. ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರ ಡಿ. ವೇದವ್ಯಾಸ ಕಾಮತ್ ಸಭೆಯಲ್ಲಿ ಉಪಸ್ಥಿತರಿದ್ದರು.

ಕಲಾಕೃತಿ ತಯಾರಿಸಿದ ವಿಕ್ರಂ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ರಂಜನ್ ಬೆಳ್ಳರ್ಪಾಡಿ ವಂದಿಸಿದರು. ಅಭಿಷೇಕ್ ಶೆಟ್ಟಿ ನಿರೂಪಿಸಿದರು.
ಮಂಗಳೂರು ಮಹಾನಗರದ ಜಾಗೃತ ನಾಗರಿಕರು ಮತ್ತು ಸ್ವಚ್ಚ ಮಂಗಳೂರಿನ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು