10:03 PM Tuesday24 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಗಂಜಿ ಕಾಮಗಾರಿಗೆ 38. 82 ಕೋಟಿ ಸಾಲ: ಪಾಲಿಕೆ ಆಡಳಿತ ವಿರುದ್ಧ ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ

09/01/2023, 17:59

ಮಂಗಳೂರು(reporterkarnataka.com): ಮಹಾನಗರ ಪಾಲಿಕೆ ಆಡಳಿತ ತನ್ನ 60 ವಾರ್ಡ್ ಗಳಲ್ಲಿ ಗಂಜಿ ಕಾಮಗಾರಿಗಳನ್ನು ಮಾಡುವುದಕ್ಕೆ 38. 82 ಕೋಟಿ ರೂಪಾಯಿ ಸಾಲ ಮಾಡಿರುವ ಕುರಿತು ಮಾಜಿ ಶಾಸಕ ಜೆ. ಆರ್. ಲೋಬೋ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾಲಿಕೆ ಆಡಳಿತ ದಿಕ್ಕುತಪ್ಪುತ್ತಿರುವುದಕ್ಕೆ ಇದೊಂದು ಜೀವಂತ ನಿದರ್ಶನ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆಯ ಈ ಜನವಿರೋಧಿ ಆಡಳಿತವನ್ನು ತೀವ್ರವಾಗಿ ಖಂಡಿಸಲಾಗುತ್ತದೆ. ಡಂಬಲ್ ಎಂಜಿನ್ ಸರ್ಕಾರದಿಂದ ಅನುದಾನ ತಂದು ಅಭಿವೃದ್ಧಿ ಕೆಲಸ ಮಾಡಿ ಎಂದು ಒತ್ತಾಯಿಸಿದರು.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದಿಂದ (ಕೆಯುಐಡಿಎಫ್‌ಸಿ) ಸಣ್ಣಪುಟ್ಟ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮೊದಲು ಪಾಲಿಕೆಗೆ ವಿವಿಧ ಮೂಲಗಳ ಮೂಲಕ ಬರುವ ಆದಾಯದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಫುಟ್‌ಪಾತ್‌, ಒಳಚರಂಡಿಗಳು ಮತ್ತು ತಡೆಗೋಡೆಗಳಂತಹ ಸಣ್ಣ ಗಂಜಿ ಕಾಮಗಾರಿಗಳನ್ನು ಸಾಲ ಪಡೆದು ಮಾಡುವ ಬದಲು ಪಾಲಿಕೆಯ ಆಂತರಿಕ ನಿಧಿಯನ್ನು ಬಳಸಿ ನಿರ್ಮಿಸಬೇಕು. ದೀರ್ಘಾವಧಿಯಲ್ಲಿ ಪಾಲಿಕೆಗೆ ಆದಾಯವನ್ನು ತರಲು ಸಹಾಯ ಮಾಡುವ ಆಸ್ತಿ ಸೃಷ್ಟಿಗೆ ಸಹಾಯ ಮಾಡುವ ಕೆಲಸಗಳನ್ನು ಕೈಗೊಳ್ಳಲು ಸಾಲ ಪಡೆಯಬೇಕು ಎಂದರು.
ಕೆಯುಐಡಿಎಫ್‌ಸಿಯಿಂದ ಸಾಲ ಪಡೆವ ಮಹಾನಗರ ಪಾಲಿಕೆಯ ಅವೈಜ್ಞಾನಿಕ ನಿರ್ಧಾರ ಕಾನೂನು ಉಲ್ಲಂಘನೆ ಆಗಿದೆ. ಕೆಯುಐಡಿಎಫ್‌ಸಿಯು ಆಸ್ತಿ ಸೃಷ್ಟಿ ಯೋಜನೆಗಳಿಗೆ ಮಾತ್ರ ಸಾಲವನ್ನು ಮಂಜೂರು ಮಾಡಬಹುದು. ಸಣ್ಣಪುಟ್ಟ ಕೆಲಸಗಳಿಗೆ ಸಾಲ ಪಡೆದರೆ ಸ್ಥಳೀಯ ಸಂಸ್ಥೆಯ ಆರ್ಥಿಕ ಸ್ಥಿತಿ ದಿಕ್ಕು ತಪ್ಪುತ್ತದೆ ಎಂದು ಹೇಳಿದರು.
ಪಾಲಿಕೆಯ ಕೌನ್ಸಿಲ್‌ನಲ್ಲಿ ಬಿಜೆಪಿ ಆಡಳಿತ ಪಕ್ಷವೂ ಸ್ಥಳೀಯ ಸಂಸ್ಥೆಯ ಆರ್ಥಿಕ ಸ್ಥಿತಿ ಕುರಿತು ಶ್ವೇತಪತ್ರ ಹೊರಡಿಸಬೇಕು. ಪ್ರತಿಪಕ್ಷಗಳ ಬೇಡಿಕೆಗಳಿಗೆ ಸ್ಪಂದಿಸಲು ಪಾಲಿಕೆ ನಿರಾಕರಿಸುತ್ತಿರುವುದು ಏಕೆ ಎಂದು ಪ್ರಶ್ನೆ ಮಾಡಿದರು.

ನಗರದಲ್ಲಿ ಆಸ್ತಿ ತೆರಿಗೆಯನ್ನು ವೈಜ್ಞಾನಿಕ ರೀತಿಯಲ್ಲಿ ಸಂಗ್ರಹಿಸುವ ಮೂಲಕ ಮತ್ತು ನಿಯಮಾವಳಿ ಉಲ್ಲಂಘಿಸಿದ ಕಟ್ಟಡಗಳಿಂದ ದುಪ್ಪಟ್ಟು ತೆರಿಗೆ ಸಂಗ್ರಹಿಸುವ ಮೂಲಕ ಪಾಲಿಕೆ ತನ್ನ ಆದಾಯ ಸಂಗ್ರಹವನ್ನು ಹೆಚ್ಚಿಸಬಹುದು. ಆದಾಯ ಸಂಗ್ರಹದಲ್ಲಿನ ಸೋರಿಕೆಯನ್ನು ಕಂಡು ಹಿಡಿಯುವ ಕೆಲಸವನ್ನು ಪಾಲಿಕೆ ಮಾಡಬೇಕು ಎಂದರು ಒತ್ತಾಯಿಸಿದರು.
ಪಾಲಿಕೆ ಪ್ರತಿಪಕ್ಷದ ನಾಯಕ ನವೀನ್ ಡಿಸೋಜ, ಶಶಿಧರ ಹೆಗ್ಡೆ, ವಿಶ್ವಾಸ್ ಕುಮಾರ್ ದಾಸ್, ಭಾಸ್ಕರ್ ಮೊಯ್ಲಿ, ಟಿ.ಕೆ. ಸುಧೀರ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು