6:51 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ಜುಗಾರಿ ಅಡ್ಡೆ, ಜೂಜು ಕೇಂದ್ರಗಳಿಗೆ ಡಿವೈಎಫ್ಐ ಮುತ್ತಿಗೆ

11/01/2023, 22:15

ಮಂಗಳೂರು(reporterkarnataka.com): ನಗರದಲ್ಲಿ ಕಾರ್ಯಾಚರಿಸುತ್ತಿರುವ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗೆ ಡಿವೈಎಫ್ ಐ ವತಿಯಿಂದ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಜುಗಾರಿ ಅಡ್ಡೆ, ವಿಡಿಯೋ ಗೇಮ್, ಸ್ಕಿಲ್ ಗೇಮ್ ಗಳಂತಹ ಜೂಜುಕೇಂದ್ರಗಳನ್ನು ಶಾಶ್ವತವಾಗಿ ಮುಚ್ಚಲು ಒತ್ತಾಯಿಸಿ ಬುಧವಾರ ಡಿವೈಎಫ್ಐ ಕಾರ್ಯಕರ್ತರು ನಗರ ಹೃದಯ ಭಾಗದಲ್ಲಿ ಕಾರ್ಯಾಚರಿಸುತ್ತಿದ್ದ ಜೂಜು ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಬಾಗಿಲು ಮುಚ್ಚಿಸಿದರು.

ಈ ವೇಳೆ ಡಿವೈಎಫ್ ಐ ಜಿಲ್ಲಾಧ್ಯಕ್ಷ ಬಿ.ಕೆ. ಇಂಮ್ತಿಯಾಜ್ ಮಾತನಾಡಿ, ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯೊಳಗೆ ದಿನೇ ದಿನೇ ಸ್ಕಿಲ್ ಗೇಮ್, ವಿಡಿಯೋ ಗೇಮ್, ಜುಗಾರಿ ಅಡ್ಡೆಗಳು ರಾಜಾರೋಷವಾಗಿ ಕಾರ್ಯಾಚರಿಸುತ್ತಿವೆ. ರಿಕ್ರಿಯೇಶನ್ ಕ್ಲಬ್ ನ ಹೆಸರಿನಲ್ಲಿ ಜೂಜು ಕೇಂದ್ರಗಳನ್ನು ನಡೆಸಿ ಮೋಸದಾಟಕ್ಕೆ ಜನರನ್ನು ಬಲಿಪಡೆಯುತ್ತಿದೆ. ನಗರದ ಸಣ್ಣ ವ್ಯಾಪಾರಿಗಳು , ಕಾರ್ಮಿಕರು ,ವಿದ್ಯಾರ್ಥಿಗಳನ್ನು ಒಳಗೊಂಡಂತೆ ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರನ್ನು ಈ ಅಡ್ಡೆ ಗುರಿಯಾಗಿಸಿ ಜನರ ದುಡಿಮೆಯ ಹಣವನ್ನು ದೋಚುವ ಕಾರ್ಯದಲ್ಲಿ ತೊಡಗಿದೆ. ಈ ಮೋಸದಾಟಕ್ಕೆ ಸಿಲುಕಿದ ಬಹಳಷ್ಟು ಕುಟುಂಬಗಳು ತಮ್ಮ ಮನೆ, ಮಠ ಅಮೂಲ್ಯ ಸೊತ್ತುಗಳನ್ನು ಕಳಕೊಂಡು ಬೀದಿಗೆ ಬಿದ್ದಿವೆ. ಇಂತಹ ಅಕ್ರಮ ಜೂಜು ಕೇಂದ್ರಗಳ ವಿರುದ್ಧ ಸಾರ್ವಜನಿಕರು ಬಹಳಷ್ಟು ವಿರೋಧ ವ್ಯಕ್ತಪಡಿಸಿದರೂ ಸ್ಥಳೀಯ ಠಾಣೆಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬರೀ ತೋರಿಕೆಗಷ್ಟೆ ಬಂದ್ ಮಾಡುವ ನಾಟಕ ಮಾಡಿ ಮತ್ತೆ ಕೆಲದಿನದ ನಂತರ ಯಥಾ ಸ್ಥಿತಿಯಾಗಿ ಜೂಜು ಕೇಂದ್ರಗಳು ಕಾರ್ಯಾಚರಿಸುತ್ತವೆ ಎಂದರು.

ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರ್, ನವೀನ್ ಕೊಂಚಾಡಿ, ಹನೀಫ್ ಬೇಂಗ್ರೆ, ಮುಸ್ತಫ ಕಲ್ಲಕಟ್ಟೆ, ರಿಯಾಬ್, ಆಸೀಫ್, ಸಾಧಿಕ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು