8:12 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಬಿಪಿಎಲ್‍ನಿಂದ ಎಪಿಎಲ್‍ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪುನರ್ ಮಂಜೂರಾತಿಗೆ ಪರಿಶೀಲನೆ

06/07/2021, 07:54

ಮಂಗಳೂರು (reporterkarnataka news): ಜಿಲ್ಲೆಯಲ್ಲಿ ಬಿಪಿಎಲ್‍ನಿಂದ ಎಪಿಲ್‍ಗೆ ಪರಿವರ್ತಿಸಲಾದ ಪಡಿತರ ಚೀಟಿಗಳ ಪ್ರಕರಣಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಪರಿವರ್ತಿಸಲಾದ ಪಡಿತರ ಚೀಟಿದಾರರಿಗೆ ಆಹಾರ ವಿತರಣೆಗೆ ಸೂಕ್ತ ಕ್ರಮಕೈಗೊಳ್ಳುವ ಕುರಿತು ಪಡಿತರ ಚೀಟಿಗಳ ಪುನರ್ ಪರಿಶೀಲನೆ ಕುರಿತಂತೆನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
 ಪಡಿತರ ಚೀಟಿದಾರರ ಪೈಕಿ 1,595 ಜನರು ಆದಾಯ ತೆರಿಗೆ ಪಾವತಿದಾರರಾಗಿದ್ದಾರೆ, 1.20 ಲಕ್ಷ ರೂ.ಗಳಿಗೂ ಹೆಚ್ಚು ಆದಾಯವಿರುವ 3,526 ಪಡಿತರದಾರರು ಸೇರಿದಂತೆ ಒಟ್ಟು 5,121 ಪ್ರಸ್ತುತ ಆದಾಯ ಹೆಚ್ಚಿರುವ ಹಿನ್ನಲೆಯಲ್ಲಿ ಪಡಿತರ ಆಹಾರ ಸೌಲಭ್ಯಗಳನ್ನು ಪಡೆಯಲಾಗದೇ ಆತಂಕದಲ್ಲಿರುವವರ ಬಗ್ಗೆ ಸಭೆಯಲ್ಲಿ ಗಹನವಾದ ಚರ್ಚೆ ನಡೆಯಿತು. ಆದಾಯ ಹೆಚ್ಚಿರುವ 3,526 ಫಲಾನುಭವಿಗಳ ಪೈಕಿ, 820 ಮಂದಿಗೆ ಮಾತ್ರ ಪಡಿತರ ರದ್ದು ಪಡಿಸಿದ್ದು, ಉಳಿದ 2,706 ಜನರ ಪಡಿತರ ತಡೆಹಿಡಿಯಬಾರದು ಎಂದು ಜಿಲ್ಲಾ ಉಸುವಾರಿ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

ಆದಾಯ ತೆರಿಗೆ ಪಾವತಿದಾರರು ಆರ್ಥಿಕವಾಗಿ ಬಡವರಾಗಿದ್ದರೂ ಕೂಡ, ವಾಸಕ್ಕೆ ಮನೆ ನಿರ್ಮಿಸಿಕೊಳ್ಳಲು ಬ್ಯಾಂಕ್‍ನಿಂದ ಸಾಲ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಿದ್ದು, ಅಂತಹವ ಪಡಿತರ ಚೀಟಿಯನ್ನು ಬಿಪಿಎಲ್‍ನಿಂದ ಎಪಿಎಲ್‍ಗೆ ಪರಿವರ್ತಿಸಬಾರದು ಎಂದು ಸಭೆಯಲ್ಲಿ ನಿರ್ಣಯಿಸಿದ ಹಿನ್ನಲೆಯಲ್ಲಿ, ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕಿ ರಮ್ಯಾ ಮಾತನಾಡಿ, ಈ ಬಗ್ಗೆ ವಿವರವಾದ ವರದಿಯನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಯುಕ್ತರಿಗೆ ಸಲ್ಲಿಸಿ ಅವರಿಂದ ಅನುಮತಿ ಪಡೆಯುವುದಾಗಿ ತಿಳಿಸಿದರು.
ಕಂದಾಯ ಇಲಾಖೆ ವರದಿ ಪ್ರಕಾರ 1.20 ಲಕ್ಷಕ್ಕೂ ಹೆಚ್ಚು ಆದಾಯ ಹೊಂದಿರುವ ಪಡಿತರ ಚೀಟಿದಾರರ ಪೈಕಿ ಪ್ರತಿ ಗ್ರಾಮ ಲೆಕ್ಕಧಿಕಾರಿಗಳಿಂದ ವಿವರವಾದ ವರದಿಯನ್ನು ಕೂಡಲೇ ಪಡೆಯಬೇಕು, ವರದಿಯೊಂದಿಗೆ ಸಮಗ್ರ ಮಾಹಿತಿಯನ್ನು ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಗಮನಕ್ಕೆ ತಂದು ಅನುಮತಿ ಪಡೆದು, ಅರ್ಹರಿಗೆ ಪಡಿತರ ನೀಡುವ ಬಗ್ಗೆ ಕ್ರಮಕೈಗೊಳ್ಳುವ ಕುರಿತು ಸಭೆಯಲ್ಲಿ ಸೂಚನೆ ನೀಡಲಾಯಿತು.
ಪಡಿತರ ಚೀಟಿ ಹೊಂದಿರುವವರಲ್ಲಿ ಆ ಕುಟುಂಬದ ಮುಖ್ಯಸ್ಥರು ಮರಣ ಹೊಂದಿದ್ದರೂ, ಇ-ತಂತ್ರಾಂಶದಲ್ಲಿ ಮರಣ ಹೊಂದಿದವರ ಹೆಸರನ್ನು ಬೇರ್ಪಡಿಸದ ಬಗ್ಗೆ ವರದಿಯಾಗಿದ್ದು, ಮೃತರ ಉತ್ತರಾಧಿಕಾರಿಗಳು ಪಡಿತರ ಚೀಟಿಯಲ್ಲಿ, ಮೃತಪಟ್ಟವರ ಹೆಸರನ್ನು ತೆಗೆದು ಹಾಕಿಸಲು ಸೂಕ್ತ ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. 
ಶಾಸಕರಾದ ರಾಜೇಶ್ ನಾಯಕ್, ಉಮನಾಥ್ ಕೋಟ್ಯಾನ್ ಹಾಗೂ ಡಾ. ಭರತ್ ಶೆಟ್ಟಿಯವರು ಪಡಿತರಕ್ಕೂ ಹೆಚ್ಚಾಗಿ ಜನಸಾಮಾನ್ಯರು ಆರೋಗ್ಯಕ್ಕೆ ಸಂಬಂಧಿಸಿದಂತೆ ಬಿಪಿಎಲ್ ಪಡಿತರ ಚೀಟಿಯ ಅನಿವಾರ್ಯತೆ ಹೊಂದಿದ್ದಾರೆ ಎಂದು ಸಭೆಯಲ್ಲಿ ತಿಳಿಸಿದ ಹಿನ್ನಲೆಯಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಸೌಲಭ್ಯಕ್ಕಾಗಿ ಈಗಾಗಲೇ ಬಿಪಿಎಲ್ ಪಡಿತರ ಚೀಟಿಗಾಗಿ ಆರ್ಜಿ ಸಲ್ಲಿಸಿದ್ದ 4000 ಮಂದಿಯ ಅರ್ಜಿ ಪರಿಶೀಲಿಸಿ ಕೂಡಲೇ ಬಿಪಿಎಲ್ ಪಡಿತರ ಚೀಟಿ ಪಡೆಯ ಅಗತ್ಯವೆನಿಸಿದರೆ ಮತ್ತೊಮ್ಮೆ ಜಿಲ್ಲೆಯ ಶಾಸಕರೊಂದಿಗೆ ಆಹಾರ ಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸುವುದಾಗಿ ಸಚಿವರು ತಿಳಿಸಿದರು. 
ಯಾವುದೇ ಕಾರಣಕ್ಕೂ ತಾಂತ್ರಿಕ ಕಾರಣಗಳಿಗಾಗಿ ಬಡವರ ಪಡಿತರವನ್ನು ತಡೆಹಿಡಿಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದರು. 
ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ಸಹಾಯಕ ಆಯುಕ್ತ ಮದನ್ ಮೋಹನ್, ಆಹಾರ ಮತ್ತು ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ರಮ್ಯಾ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು