11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ದೇಶವನ್ನೇ ಬೆಚ್ಚಿ ಬೀಳಿಸಿದ ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಒಟ್ಟು 42 ಮಂದಿ ಬಂಧನ

06/07/2021, 08:56

ಚಿಕ್ಕಮಗಳೂರು(reporterkarnataka news);

ಶೃಂಗೇರಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 42 ಮಂದಿಯನ್ನು ಬಂಧಿಸಲಾಗಿದ್ದು, ಇವರಲ್ಲಿ 30 ಮಂದಿಯ ವಿರುದ್ಧ ಪೊಕ್ಸಾ ಕಾಯಿದೆಯಡಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.

ಜನವರಿ 30 ರಂದು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಶೃಂಗೇರಿ ಠಾಣೆಗೆ ಪ್ರಕರಣ ಕುರಿತು ದೂರು ನೀಡಿದ್ದರು. ಅನೇಕ ಮಂದಿ ಪುರುಷರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಕುರಿತು ಆರೋಪಿಸಿದ್ದರು. ತನಿಖೆ ನಡೆಸಿದ ಪೊಲೀಸರು, ಅತ್ಯಾಚಾರ ನಡೆಸಿದವರು ಸಂಖ್ಯೆ ಕೇಳಿ ಬೆಚ್ಚಿ ಬಿದ್ದಿದ್ದರು. ಬಾಲಕಿಯ ಚಿಕ್ಕಮ್ಮ ಎನ್ನಲಾದ ಮಹಿಳೆಯೇ ಪ್ರಕರಣದ ಪ್ರಮುಖ ಸೂತ್ರದಾರಳಾಗಿದ್ದಾಳೆ. ಹಣಕ್ಕಾಗಿ ಈಕೆಯೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲು ಅವಕಾಶ ನೀಡುತ್ತಿದ್ದಳು ಎಂದು ತಿಳಿದು ಬಂದಿದೆ.

ಜಿಲ್ಲೆಯ ಇತಿಹಾಸದಲ್ಲಿ ಒಂದೇ ಪ್ರಕರಣದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಚಾರ್ಜ್‌ಶೀಟ್‌ಗಳನ್ನು ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು