10:32 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ

13/01/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂಭವಾಗಿದೆ.

ಒಂದೆಡೆ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ಮೇಲಿಂದ ಮೇಲೆ ನಡೆಯುತ್ತಿದೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಸಭೆ ಆಗಾಗ ನಡೆಯುತ್ತಿದೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ಕೈ ಮುಖಂಡರು ನಡೆಸಿದ್ದಾರೆ.


ನಯನ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಯನ ಮೋಟಮ್ಮ ವಿರುದ್ಧ ಬಂಡಾಯದ ಧ್ವಜ ಹಾರಲಾರಂಭಿಸಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡಿದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ಸ್ಥಳೀಯ ಕೆಲವು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ ಸಭೆ ಕೈ ಮುಖಂಡರು ನಡೆಸಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತೆ ಎಂದು ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ದ ಕಾರ್ಯಕರ್ತರುಕಿಡಿ ಕಾರಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಮೋಟಮ್ಮ ವಿರುದ್ಧ ಕಿಡಿ ಕಾರಿದ್ದಾರೆ.
ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಸಭೆ ಸೇರಿದ ಮುಖಂಡರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು