3:31 AM Saturday22 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮೂಡಿಗೆರೆ: ಟಿಕೆಟ್ ಘೋಷಣೆಗೂ ಮುನ್ನವೇ ಕಾಂಗ್ರೆಸ್ ನಲ್ಲಿ ಭಿನ್ನಮತ ಸ್ಫೋಟ; ಮೋಟಮ್ಮ ಕುಟುಂಬಕ್ಕೆ ವಿರೋಧ

13/01/2023, 15:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಾರ್ಟಿಯಲ್ಲಿ ಟಿಕೆಟ್ ಭಾರೀ ಜೋರಿನಲ್ಲಿ ಫೈಟ್ ಶುರುವಾಗಿದೆ. ಮೂಡಿಗೆರೆ ವಿಧಾನಸಭೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಭಿನ್ಬಮತ ತಾಕಲಾಟ ಆರಂಭವಾಗಿದೆ.

ಒಂದೆಡೆ ಟಿಕೆಟ್ ಗಾಗಿ ಲಾಬಿ ನಡೆಸುತ್ತಿರುವ ಆಕ್ಷಾಂಕಿಗಳು ಮತ್ತೊಂದೆಡೆ ಕೈ ಮುಖಂಡರ ಭಿನ್ನಮತದ ಸಭೆ ಮೇಲಿಂದ ಮೇಲೆ ನಡೆಯುತ್ತಿದೆ.
ಮಾಜಿ ಸಚಿವೆ ಮೋಟಮ್ಮ ಹಾಗೂ ಪುತ್ರಿ ನಯನಾ ಮೋಟಮ್ಮ ವಿರುದ್ಧ ಬಂಡಾಯದ ಸಭೆ ಆಗಾಗ ನಡೆಯುತ್ತಿದೆ. ಒಂದು ತಿಂಗಳ ಅಂತರದಲ್ಲಿ ಐದು ಸಭೆಗಳನ್ನು ಕೈ ಮುಖಂಡರು ನಡೆಸಿದ್ದಾರೆ.


ನಯನ ಮೋಟಮ್ಮ ಹೊರತುಪಡಿಸಿ ಉಳಿದ ಆಕ್ಷಾಂಕಿಗಳು ಕೂಡ ಬಂಡಾಯದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಡಿ‌.ಕೆ. ಶಿವಕುಮಾರ್ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ನಯನ ಮೋಟಮ್ಮ ವಿರುದ್ಧ ಬಂಡಾಯದ ಧ್ವಜ ಹಾರಲಾರಂಭಿಸಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡಿದಂತೆ ವರಿಷ್ಠರಿಗೆ ಮನವಿ ಸಲ್ಲಿಸಲು ಸ್ಥಳೀಯ ಕೆಲವು ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆ.

ಸಭೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸುತ್ತಿರುವ ಕಾಂಗ್ರೆಸ್ ಮುಖಂಡರು, ಗ್ರಾ.ಪಂ ಸದಸ್ಯರು ಭಾಗಿಯಾಗಿದ್ದರು. ಗೋಣಿಬೀಡು ಹೋಬಳಿಯಲ್ಲಿ ಬಂಡಾಯದ ಸಭೆ ಕೈ ಮುಖಂಡರು ನಡೆಸಿದ್ದಾರೆ.

ನಯನ ಮೋಟಮ್ಮಗೆ ಟಿಕೆಟ್ ನೀಡಿದರೆ ಕಾಂಗ್ರೆಸ್ ಪಕ್ಷ ಸೋಲುತ್ತೆ ಎಂದು ಸಭೆಯಲ್ಲಿ ಮಾಜಿ ಸಚಿವೆ ಮೋಟಮ್ಮ ವಿರುದ್ದ ಕಾರ್ಯಕರ್ತರುಕಿಡಿ ಕಾರಿದ್ದಾರೆ. ಮೂಡಿಗೆರೆಯಲ್ಲಿ ಮೋಟಮ್ಮನವರ ಕುಟುಂಬ ರಾಜಕಾರಣ ಕೊನೆ ಆಗಬೇಕು. ವಿಧಾನಪರಿಷತ್ ಚುನಾವಣೆಯಲ್ಲಿ ಗಾಯತ್ರಿ ಶಾಂತೇಗೌಡರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಮೋಟಮ್ಮ ವಿರುದ್ಧ ಕಿಡಿ ಕಾರಿದ್ದಾರೆ.
ಇಡೀ ಕ್ಷೇತ್ರದ ಜನರು ಮೋಟಮ್ಮ ಕುಟುಂಬದ ವಿರುದ್ಧವಿದೆ. ನಯನ ಮೋಟಮ್ಮಗೆ ಟಿಕೆಟ್ ನೀಡದಂತೆ ವರಿಷ್ಠರಲ್ಲಿ ಮನವಿ ಮಾಡಬೇಕೆಂದು ಸಭೆ ಸೇರಿದ ಮುಖಂಡರು ನಿರ್ಧರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು