2:46 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಸ್ಯಾಂಟ್ರೋ ರವಿ ಗುಜರಾತಿನಲ್ಲಿ ಬಂಧನ: ಮೈಸೂರಿನಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ ರವಿ

13/01/2023, 18:37

ಬೆಂಗಳೂರು(reporterkarnataka.com): ರಾಜ್ಯ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ ಸ್ಯಾಂಟ್ರೋ ರವಿಯನ್ನು ಬಂಧಿಸಲಾಗಿದೆ. ರಾಜ್ಯದಿಂದ ಪರಾರಿಯಾದ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಶುಕ್ರವಾರ ಬಂಧಿಸಲಾಗಿದೆ.

ಮೈಸೂರಿನಲ್ಲಿ ಪ್ರಕರಣಗಳು ದಾಖಲಾಗುತ್ತಿದ್ದಂತೆ ರವಿ ನಾಪತ್ತೆಯಾಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕೆ ವ್ಯಕ್ತವಾಗಿತ್ತು. ಆದರೆ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಶುಕ್ರವಾರ ಸ್ಯಾಂಟ್ರೊ ರವಿ ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಯಾಂಟ್ರೊ ರವಿ ವಿರುದ್ಧ ದಾಖಲಾಗಿರುವ ದೂರಿನ ತನಿಖೆ ನಡೆಸಲು ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದರು. ಮೈಸೂರು, ರಾಮನಗರ ಪೊಲೀಸರು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಸ್ಯಾಂಟ್ರೊ ರವಿ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.

ನಾಲ್ವರು ಎಸ್ಪಿಗಳ ನೇತೃತ್ವದಲ್ಲಿ ಸ್ಯಾಂಟ್ರೊ ರವಿ ಬಂಧನಕ್ಕಾಗಿ ವಿಶೇಷ ತಂಡಗಳನ್ನು ರಚನೆ ಮಾಡಲಾಗಿತ್ತು. ಗುಜರಾತ್‌ನಲ್ಲಿ ಬಂಧಿಸಿ ಪೊಲೀಸರು ಕರ್ನಾಟಕಕ್ಕೆ ಕರೆತರುತ್ತಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಸ್ಯಾಂಟ್ರೊ ರವಿ ವಿರುದ್ಧ ದೂರು ದಾಖಲಾದ ಬಳಿಕ ಆತ ಪರಾರಿಯಾಗಿದ್ದ.

ಇತ್ತೀಚಿನ ಸುದ್ದಿ

ಜಾಹೀರಾತು