10:28 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

‘ನಾ ನಾಯಕಿ’ ಸಮಾವೇಶ: ಜ.16ರಂದು ಪ್ರಿಯಾಂಕಾ ಗಾಂಧಿ ಬೆಂಗಳೂರಿಗೆ: ದ.ಕ. ಜಿಲ್ಲೆಯಿಂದ ನೂರಾರು ಕಾರ್ಯಕರ್ತರು

14/01/2023, 11:58

ಬೆಂಗಳೂರು(reporterkarnataka.com): ರಾಜ್ಯ ಮಹಿಳಾ ಕಾಂಗ್ರೆಸ್ ನಿಂದ
ಬೆಂಗಳೂರಿನ ಅರಮನೆ ಮೈದಾನದಲ್ಲಿ “ನಾ ನಾಯಕಿ” ಸಮಾವೇಶವನ್ನು ಜನವರಿ 16ರಂದು ಹಮ್ಮಿಕೊಳ್ಳಲಾಗಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಮಾವೇಶದಲ್ಲಿ ದ.ಕ. ಜಿಲ್ಲೆಯಿಂದ ನೂರಾರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಭಾಗವಹಿಸಲಿರುವರು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ತಿಳಿಸಿದ್ದಾರೆ.

ಮಹಿಳೆಯರಿಗೂ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಬೇಕು ಎಂದು ಪಕ್ಷದ ಮಹಿಳಾ ಘಟಕದ ವತಿಯಿಂದ ಪ್ರಿಯಾಂಕ ಗಾಂಧಿಯವರಿಗೆ ಒಕ್ಕೊರಲಿನ ಒತ್ತಾಯ ಮಾಡಲಾಗುವುದು. ಮಹಿಳೆಯರನ್ನು ಗುರಿಯಾಗಿಸಿಕೊಂಡು ಮಹಿಳಾ ಕಲ್ಯಾಣಕ್ಕಾಗಿ ಈ ಬಾರಿ ಕಾಂಗ್ರೆಸ್ ನಿಂದ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು. ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಅವಕಾಶ ಸಿಗುವಂತಾಗಲು ಹಾಗೂ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸದೃಢ ವ್ಯವಸ್ಥೆ ನಿರ್ಮಾಣ ಮಾಡುವ ಉದ್ದೇಶದಿಂದ ಪ್ರಣಾಳಿಕೆ ಸಿದ್ಧಪಡಿಸಲಾಗುತ್ತಿದೆ. ಈ ಬಗ್ಗೆ ಮಹಿಳೆಯರಿಂದಲೇ ಸಲಹೆ, ಅಭಿಪ್ರಾಯ ಪಡೆಯಲಾಗುತ್ತಿದೆ.

ಈ ಸಮಾವೇಶಕ್ಕೆ ದ.ಕ.ಜಿಲ್ಲೆಯ ಮಾಜಿ ಶಾಸಕಿ, ಟಿಕೆಟ್ ಆಕಾಂಕ್ಷಿಗಳು, ಪದಾಧಿಕಾರಿಗಳು ಸೇರಿದಂತೆ ಪಂಚಾಯಿತಿ ಹಾಗೂ ವಾರ್ಡ್ ನಾಯಕಿಯರು, ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲೆಟ್ ಪಿಂಟೊ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು