9:16 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ: ಪೊಲೀಸ್ ಸಿಬ್ಬಂದಿಗಳು ಜನಸ್ನೇಹಿಯಾಗಲು ಕಮಿಷನರ್ ಶಶಿಕುಮಾರ್ ಕರೆ

15/01/2023, 09:31

ಚಿತ್ರ/ವರದಿ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಮಂಗಳೂರು ನಗರ ಪೊಲೀಸ್ ಹಾಗೂ ಫಾರಂ ಫಿಝ ಮಾಲ್ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ಉದ್ಘಾಟನಾ ಸಮಾರಂಭ ಫಾರಂ ಫಿಝ ಮಾಲ್ ನಲ್ಲಿ ಜರುಗಿತು.


ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸಮಾರಂಭ ಉದ್ಘಾಟಿಸಿದರು.



ಅವರು ಮಾತನಾಡಿ, ಪೊಲೀಸ್ ಸಿಬ್ಬಂದಿಗಳು ಜನ ಸ್ನೇಹಿಯಾಗಿ ಕಾರ್ಯನಿರ್ವಹಿಸಿ ಎಂದು ಕರೆ ನೀಡಿದರು.
ಸಾರ್ವಜನಿಕರು ಆದರ್ಶ ನಾಗರಿಕರಾಗಿ ಬದುಕುವುದು ಮಂಗಳೂರು ಜನತೆಯಿಂದಲೇ ಪ್ರಾರಂಭಿಸಲಿ. ಕಾನೂನು ಪಾಲನೆ ಮಾಡಿ ಸಂಚಾರ ನಿಯಮವನ್ನು ಪ್ರೀತಿಸಿ, ರೂಡಿಸಿಕೊಳ್ಳಿ. ನಿಮ್ಮ ಪ್ರಾಣವನ್ನು ಉಳಿಸುವ ಸ್ವಾರ್ಥಿಗಳಾಗಿ ವಾಹನ ಚಲಾವಣೆ ಸಮಯದಲ್ಲಿ ಜಾಗರೂಕರಾಗಿರಿ. ಅಪಘಾತ ಮುಕ್ತ ನಗರವನ್ನಾಗಿಸುವಲ್ಲಿ ಕೈ ಜೋಡಿಸೋಣ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಉಪ ಪೊಲೀಸ್ ಆಯುಕ್ತ ಅಂಶು ಕುಮಾರ್, ಮಂಗಳೂರು ನಗರ ಸಿ.ಎ.ಆರ್ ಉಪ ಪೊಲೀಸ್ ಆಯುಕ್ತ ಪಿ. ಉಮೇಶ್, ಡಿಸಿಪಿ ದಿನೇಶ್ ಕುಮಾರ್ ಹಾಗೂ ವಿಶೇಷ ಆಹ್ವಾನಿತರಾಗಿ ದೇರಳಕಟ್ಟೆ ಯೆನಾಪೋಯ ಡೆಂಟಲ್ ಕಾಲೇಜ್ ಮ್ಯಾಕ್ಸಿಲೋ ಫೆಸಿಯಲ್ ಸರ್ಜಾನ್, ಪ್ರೊಫೆಸರ್ ಅಂಡ್ ಹೆಚ್. ಓ.ಡಿ ಡಾ. ಜಗದೀಶ್ ಚಂದ್ರ, ಮಂಗಳೂರು ಫೀಝ ಮಾಲ್ ನ ಸೆಂಟರ್ ಹೆಡ್ ಅರವಿಂದ ಶ್ರೀ ವಾತ್ಸವ, ಉಪಸ್ಥಿತರಿದ್ದರು.


ಮಂಗಳೂರು ಸಿಟಿ ಟ್ರಾಫಿಕ್ ಪೊಲೀಸ್ ಎಸಿಪಿ.ಗೀತಾ ಕುಲಕರ್ಣಿ ಕಾರ್ಯಕ್ರಮದ ಆಯೋಜಕರಾಗಿದ್ದರು.
ಮಂಗಳೂರು ಪೂರ್ವ ಸಂಚಾರ ವಿಭಾಗ ಇನ್ಸ್ಪೆಕ್ಟರ್ ಗೋಪಾಲ್ ಕೃಷ್ಣಭಟ್ ಸೇರಿದಂತೆ ವಿವಿಧ ಟ್ರಾಫಿಕ್ ಠಾಣಾ ಇನ್ಸ್ಪೆಕ್ಟರ್ ಗಳು, ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಗಳಾದ ರವೀಶ್ ಕುಮಾರ್,ದಿನಕರ್,ಪೊಲೀಸ್ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ಕಾರ್ಯಕ್ರಮದಲ್ಲಿ ಸಂಚಾರಪಾಲನೆಯ ಭಿತ್ತಿಚಿತ್ರಗಳನ್ನು ಅನಾವರಣಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು