5:01 PM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

ಮಂಗಳೂರು ಕೋರ್ಟ್‌ ಕಾಂಪ್ಲೆಕ್ಸ್‌ನಲ್ಲಿ ಡಿಫೆನ್ಸ್‌ ಕೌನ್ಸೆಲ್ ಕಚೇರಿ ಕಾರ್ಯಾರಂಭ

15/01/2023, 19:03

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಂಗಳೂರು ನ್ಯಾಯಾಲಯ ಸಂಕೀರ್ಣದಲ್ಲಿ ಇದೇ ಮೊದಲ ಬಾರಿಗೆ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ್) ಕಚೇರಿ ಕಾರ್ಯಾರಂಭ ಮಾಡಿದೆ.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜೆ. ವೀರಪ್ಪ ಕಾನೂನು ನೆರವು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿರಕ್ಷಕರ ಕಚೇರಿಯನ್ನು ಏಕಕಾಲಕ್ಕೆ ಲೋಕಾರ್ಪಣೆ ಮಾಡಿದರು.
ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ರವೀಂದ್ರ ಜೋಷಿ ಅವರು ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.

ಮಂಗಳೂರಿನ ಹಿರಿಯ ನ್ಯಾಯವಾದಿ ವಾಸುದೇವ ಗೌಡ ಅವರು ಮುಖ್ಯ ಡಿಫೆನ್ಸ್ ಕೌನ್ಸೆಲ್ ಆಗಿ ಅಧಿಕಾರ ವಹಿಸಿಕೊಂಡರು. ಉಪ ಡಿಫೆನ್ಸ್ ಕೌನ್ಸೆಲ್ ಆಗಿ ಶುಕರಾಜ ಕೊಟ್ಟಾರಿ ಹಾಗೂ ಸಹಾಯಕ ಡಿಫೆನ್ಸ್ ಕೌನ್ಸೆಲ್ ಆಗಿ ಕೃಷ್ಣ ಅಧಿಕಾರ ಸ್ವೀಕರಿಸಿದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಜಿ. ಶೋಭಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲರಾದ ಇಬ್ರಾಹಿಂ ಹಾಗೂ ವಿವಿಧ ನ್ಯಾಯಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು