3:24 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಲ್ಲಡ್ಕ: ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಜಿಲ್ಲಾ ಘಟಕ ರಚನೆ

15/01/2023, 10:06

ಬಂಟ್ವಾಳ(reporterkarnataka.com): ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಘಟಕ ರಚನೆ ಮಾಡಲಾಯಿತು.

ಜಿಲ್ಲೆಯ ವಿವಿಧ ತಾಲೂಕು ಘಟನೆಗಳ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಸಂಘದ ಪದಾಧಿಕಾರಿಗಳು ಭಾಗವಹಿಸಿದ ಈ ಸಭೆಯನ್ನು ಬಂಟ್ವಾಳ ತಾಲೂಕು ಮುಖ್ಯ ಶಿಕ್ಷಕ ಸಂಘದ ಅಧ್ಯಕ್ಷರಾದ ಮಜಿ ಶಾಲೆಯ ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಎಸ್.ಕೆ ಅಧ್ಯಕ್ಷತೆ ವಹಿಸಿ , ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿದರು.

ಜಿಲ್ಲಾ ಘಟಕಕ್ಕೆ ಈ ಕೆಳಗಿನ ಪದಾಧಿಕಾರಿಗಳು ಆಯ್ಕೆಯಾದರು .
ಗೌರವಾಧ್ಯಕ್ಷರು : ಮಜಿ ಶಾಲೆಯ ನಾರಾಯಣ ಪೂಜಾರಿ ಎಸ್.ಕೆ.
ಅಧ್ಯಕ್ಷರು : ನಿಂಗರಾಜು ಕೆ.ಪಿ ಅಲಂಕಾರು ಕಡಬ
ಉಪಾಧ್ಯಕ್ಷರು : ಬಾಬು ಟಿ ಹಿರೆಬಂಡಾಡಿ ಮತ್ತು ಶ್ರೀ ಮಹಾಲಿಂಗ ಬೆಳ್ತಂಗಡಿ .
ಪ್ರಧಾನಕಾರ್ಯದರ್ಶಿ :ಗೋಪಾಲಕೃಷ್ಣ ಬನ ಸುಳ್ಯ
ಜತೆ ಕಾರ್ಯದರ್ಶಿ : ಪ್ರೇಮ ಕೆ.ಕೆ.ಕಾವಳಮುಡೂರು
ಮತ್ತು ಶಾರದಾ ಕಡಬ
ಕೋಶಾಧಿಕಾರಿ: ಪುಟ್ಟರಂಗನಾಥ ಟಿ ಬಂಟ್ವಾಳ
ಸಂಘಟನಾ ಕಾರ್ಯದರ್ಶಿಗಳಾಗಿ ಸುನಂದಾ ಸುಳ್ಯ ಮತ್ತು ಸುರೇಶ್ ಬೆಳ್ತಂಗಡಿ .
ನಿರ್ದೇಶಕರು :ಶಂಕರ್ ನಾರ್ಶಮೈದಾನ ಮತ್ತು ಮಹೇಶ್ ಕಡಬ ಆಯ್ಕೆಯಾದರು .



ಅಧ್ಯಕ್ಷರಾಗಿ ಆಯ್ಕೆಯಾದ ನಿಂಗರಾಜ್ ಕೆ.ಪಿ. ಯವರು ಮಾತನಾಡಿ ಎಲ್ಲಾ ಶಿಕ್ಷಕರು ಸಹಕಾರ ನೀಡುವಂತೆ ,ಮುಖ್ಯ ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸಂಘದೊಂದಿಗೆ ಸಂಪರ್ಕದಲ್ಲಿದ್ದುಕೊಂಡು ಕೆಲಸ ಮಾಡುತ್ತೇನೆಂಬ ಭರವಸೆಯನ್ನು ನೀಡಿದವರು .

ದೇವಕಿ ಮೋಂತಿಮಾರು ಮತ್ತು ದಾಮೋದರ ಸರ್ಕಳ ನಿರೂಪಿಸಿದ ಕಾರ್ಯಕ್ರಮದಲ್ಲಿ ಕಲ್ಲಡ್ಕ ಶಾಲೆಯ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ,ಸುಳ್ಯದ ಅಧ್ಯಕ್ಷರಾದ ದೇವರಾಜ್ ,ಬೆಳ್ತಂಗಡಿಯ ಅಧ್ಯಕ್ಷರಾದ ಬಾಲಕೃಷ್ಣ , ಪುತ್ತೂರು ಕಾರ್ಯದರ್ಶಿ ತಾರನಾಥ್ ವೀರಮಂಗಲ, ಪಾಂಡವರಕಲ್ಲು ನವೀನಾ ಕುಮಾರಿ ,ಮದ್ವದ ಭವಾನಿ ,ಆನಂದ ಕೆಮ್ಮಾನುಪಲ್ಕೆ ,ಗೋಪಾಲ ಸುರಿಬೈಲು, ಶಿವರಾಮ್ ಭಟ್ ಮಿತ್ತನಡ್ಕ ,ಚಂದ್ರಾವತಿ ಮಾಣಿ ಮತ್ತು ಎಲ್ಲಾ ತಾಲೂಕಿನ ಪದಾಧಿಕಾರಿಗಳು ಉಪಸ್ಥಿತರಿದ್ದ ಕಾರ್ಯಕ್ರಮದಲ್ಲಿ ಪುಟ್ಟರಂಗನಾಥ ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು