12:00 AM Thursday17 - July 2025
ಬ್ರೇಕಿಂಗ್ ನ್ಯೂಸ್
ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:…

ಇತ್ತೀಚಿನ ಸುದ್ದಿ

ಪ್ರೀತಿಸಿ ವಂಚನೆ: ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು; ಆರೋಪಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ಹಿಂದೇಟು?

15/01/2023, 11:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರೇಮಿಸಿದ ಯುವಕ ವಂಚಿಸಿದ ಹಿನ್ನೆಲೆಯಲ್ಲಿ ಮುಗ್ಧ ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ ತರುಣಿಯನ್ನು ದೀಪ್ತಿ(17) ಎಂದು ಗುರುತಿಸಲಾಗಿದೆ. ಹಿತೇಶ್ (25) ಎಂಬ ತರುಣ ಈಕೆಯನ್ನು ಪ್ರೀತಿಸುತ್ತಿದ್ದ. ನಂತರ ಆತನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಹಿತೇಶ್ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ನೊಂದ ಬಾಲಕಿ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ತೀವ್ರ ಅಸ್ವಸ್ಥಗೊಂಡ ಆಕೆಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಡೆತ್ ನೋಟ್ ಬಾಲಕಿ ಬರೆದಿದ್ದಾಳೆ.
ಆರೋಪಿ ಹಿತೇಶ್ ವಿರುದ್ಧ ದೂರು ದಾಖಲಿಸದೇ ಕುದುರೆ ಮುಖ ಪೊಲೀಸರು ಸತಾಯಿಸಿದ್ದರು. ನಂತರ ಪೋಷಕರ ದೂರು ಸ್ವೀಕರಿಸದ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದರು.
ಎಸ್.ಪಿ ಸೂಚನೆ ಬಳಿಕ ಆರೋಪಿ ಹಿತೇಶ್ ವಿರುದ್ಧ ದೂರು ಸ್ವೀಕಾರ ಮಾಡಲಾಗಿದೆ.ಆದರೆ ಈವರೆಗೆ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆರೋಪಿ ಬಿಜೆಪಿ ಕಾರ್ಯಕರ್ತ ಹಿತೇಶ್ ವಿರುದ್ಧ ಕ್ರಮಕ್ಕೆ ಹಿಂದೇಟು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು