3:35 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪ್ರೀತಿಸಿ ವಂಚನೆ: ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಶರಣು; ಆರೋಪಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಪೊಲೀಸರು ಹಿಂದೇಟು?

15/01/2023, 11:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಳಸ ಪದವಿಪೂರ್ವ ಕಾಲೇಜಿನ ಅಪ್ರಾಪ್ತ ವಯಸ್ಸಿನ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಪ್ರೇಮಿಸಿದ ಯುವಕ ವಂಚಿಸಿದ ಹಿನ್ನೆಲೆಯಲ್ಲಿ ಮುಗ್ಧ ಬಾಲಕಿ ಸಾವಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.
ಸಾವನ್ನಪ್ಪಿದ ತರುಣಿಯನ್ನು ದೀಪ್ತಿ(17) ಎಂದು ಗುರುತಿಸಲಾಗಿದೆ. ಹಿತೇಶ್ (25) ಎಂಬ ತರುಣ ಈಕೆಯನ್ನು ಪ್ರೀತಿಸುತ್ತಿದ್ದ. ನಂತರ ಆತನ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆರೋಪಿ ಹಿತೇಶ್ ಬಿಜೆಪಿ ಕಾರ್ಯಕರ್ತ ಎಂದು ತಿಳಿದು ಬಂದಿದೆ.

ನೊಂದ ಬಾಲಕಿ ಜ.10ರಂದು ಮನೆಯಲ್ಲಿದ್ದ ಕಳೆ ನಾಶಕ ಸೇವಿಸಿದ್ದಳು. ತೀವ್ರ ಅಸ್ವಸ್ಥಗೊಂಡ ಆಕೆಯನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ದೀಪ್ತಿ ಸಾವನ್ನಪ್ಪಿದ್ದಾಳೆ. ಸಾಯುವ ಕೊನೆಯ ಕ್ಷಣದಲ್ಲಿ ಡೆತ್ ನೋಟ್ ಬಾಲಕಿ ಬರೆದಿದ್ದಾಳೆ.
ಆರೋಪಿ ಹಿತೇಶ್ ವಿರುದ್ಧ ದೂರು ದಾಖಲಿಸದೇ ಕುದುರೆ ಮುಖ ಪೊಲೀಸರು ಸತಾಯಿಸಿದ್ದರು. ನಂತರ ಪೋಷಕರ ದೂರು ಸ್ವೀಕರಿಸದ ಕುದುರೆಮುಖ ಪೊಲೀಸರಿಗೆ ಎಸ್ಪಿ ತರಾಟೆಗೆ ತೆಗೆದುಕೊಂಡಿದ್ದರು.
ಎಸ್.ಪಿ ಸೂಚನೆ ಬಳಿಕ ಆರೋಪಿ ಹಿತೇಶ್ ವಿರುದ್ಧ ದೂರು ಸ್ವೀಕಾರ ಮಾಡಲಾಗಿದೆ.ಆದರೆ ಈವರೆಗೆ ಆರೋಪಿಯನ್ನು ಕುದುರೆಮುಖ ಪೊಲೀಸರು ಬಂಧಿಸಿಲ್ಲ. ಪೊಲೀಸರ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಆರೋಪಿ ಬಿಜೆಪಿ ಕಾರ್ಯಕರ್ತ ಹಿತೇಶ್ ವಿರುದ್ಧ ಕ್ರಮಕ್ಕೆ ಹಿಂದೇಟು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು