2:09 PM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

06/07/2021, 16:33

ಬ್ರಹ್ಮಾವರ(reporterkarnataka news):

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತು.

ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು  ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು ನೆನಪಿಸಿಕೊಂಡು ಅವರಿಗೆ ಶ್ರದ್ಧಾಂಜಲಿ ಕೋರಿದರು.

ಇದೆ ಸಂಧರ್ಭದಲ್ಲಿ ಮಾತನಾಡಿದ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಎಂ ಚಂದ್ರಶೇಖರ್ ಹೆಗ್ಡೆಯವರು, ಅವರ ಹಾಗೂ ನೊರೊನ್ಹಾರವರ 50 ವರುಷಗಳ ಸ್ನೇಹವನ್ನು ನೆನಪಿಸಿಕೊಂಡು ಅವರ ಅನುಭವಗಳನ್ನು ಹಂಚಿಕೊಂಡರು.  ಉಪಾಧ್ಯಕ್ಷರಾಗಿದ್ದ ನೊರೊನ್ಹಾರವರ ಸರಳ, ಸಜ್ಜನ ಹಾಗೂ ಪರೋಪಕಾರಿ ವ್ಯಕ್ತಿತ್ವವದ ಹಲವು ಉಧಾರಣೆಗಳನ್ನು ನೆನಪಿಸಿ ಈ ಅಜಾತಶತ್ರುವಿಗೆ ಶ್ರಧಾಂಜಲಿ ಕೋರಿದರು.

ಸಾಲ್ವಡೊರ್ ನೊರೊನ್ಹಾರವರು, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಗೆ ನೀಡಿದ ಸೇವೆಯನ್ನು ಗುರಿತಿಸಿ , ಕೆಲವೇ ದಿನಗಳಲ್ಲಿ ಕ್ಲಬ್ಬಿನ ಆವರಣದಲ್ಲಿ ಉದ್ಘಾಟನೆ ಹೊಂದಲಿರುವ ಹೊಸ ಈಜು ಕೊಳಕ್ಕೆ ‘ಸಾಲ್ವಡೊರ್ ನೊರೊನ್ಹಾ’ರವರ ಸ್ಮಾರಕವಾಗಿ ನಾಮಕರಿಸುವ ಪ್ರಸ್ತಾಪ ಮಂಡಿಸಲಾಯಿತು. ನೆರೆದಿರುವ ಸರ್ವ ಸದಸ್ಯರು ಈ ಸಲಹೆಯನ್ನು ಸ್ವಾಗತಿಸಿ , ಸರ್ವಾನುಮತಿಯಿಂದ ಒಪ್ಪಿಗೆ ನೀಡಿದರು.

1976 ರಿಂದ 2014 ವರೆಗೆ ಸುಮಾರು ನಾಲ್ಕು ದಶಕಗಳ ಕಾಲ ಎಸ ಎಂ ಎಸ ಕಾಲೇಜಿನಲ್ಲಿ ಸೇವೆ ನೀಡಿದ ನೊರೊನ್ಹಾರವರು  ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರು. ಕಳೆದ ಮೇ 19ರಂದು ಕೊರೊನ ರೋಗದಿಂದ ಉಂಟಾಗಿರುವ  ಅರೋಗ್ಯ ಸಮಸ್ಯೆಗಳಿಂದ ಅವರು  ನಿಧನ ಹೊಂದಿದರು. 

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಕಾರ್ಯದರ್ಶಿಗಳಾಗಿದ್ದ ಗ್ರೆಗೊರಿ ಡಿಸಿಲ್ವರವರು ಮಾತನಾಡಿ ಅಗಲಿದ ಸದಸ್ಯರ ಆತ್ಮಕ್ಕೆ ಶಾಂತಿ ಕೋರಿದರು ಹಾಗೂ ಹಾಜರಿದ್ದ ಎಲ್ಲರಿಗೆ ಧನ್ಯವಾದ ಅರ್ಪಣೆ ಮಾಡಿದರು. ಎರಡು ನಿಮಿಷಗಳ ಮೌನ ಪ್ರಾರ್ಥನೆ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು