1:04 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಅಗಲಿದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಣೆ

06/07/2021, 16:33

ಬ್ರಹ್ಮಾವರ(reporterkarnataka news):

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇತ್ತೀಚೆಗೆ ದಿವಂಗತರಾದ ಕ್ಲಬ್ಬಿನ ಉಪಾಧ್ಯಕ್ಷ ಸಾಲ್ವಡೊರ್ ನೊರೊನ್ಹಾ ಹಾಗೂ ಕ್ಲಬ್ಬಿನ ಸದಸ್ಯರಾಗಿದ್ದ ಜಯರಾಜ್ ಶೆಟ್ಟಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತು.

ಕ್ಲಬ್ಬಿನ ಒಳಾಂಗಣದಲ್ಲಿ ಆಯೋಜಿಸಿದ ಈ ಸಂತಾಪ ಸಭೆಯಲ್ಲಿ ಪ್ರೊಫೆಸರ್ ಕೆ ನಾರಾಯಣನ್, ಜಿ ಬಾಲಕೃಷ್ಣ ಶೆಟ್ಟಿ , ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ಚಂದ್ರಶೇಖರ ಶೆಟ್ಟಿಯವರು  ಅಗಲಿದ ಮಹನೀಯರನ್ನು ಹಾಗೂ ಅವರ ಸೇವೆಯನ್ನು ನೆನಪಿಸಿಕೊಂಡು ಅವರಿಗೆ ಶ್ರದ್ಧಾಂಜಲಿ ಕೋರಿದರು.

ಇದೆ ಸಂಧರ್ಭದಲ್ಲಿ ಮಾತನಾಡಿದ, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ ಎಂ ಚಂದ್ರಶೇಖರ್ ಹೆಗ್ಡೆಯವರು, ಅವರ ಹಾಗೂ ನೊರೊನ್ಹಾರವರ 50 ವರುಷಗಳ ಸ್ನೇಹವನ್ನು ನೆನಪಿಸಿಕೊಂಡು ಅವರ ಅನುಭವಗಳನ್ನು ಹಂಚಿಕೊಂಡರು.  ಉಪಾಧ್ಯಕ್ಷರಾಗಿದ್ದ ನೊರೊನ್ಹಾರವರ ಸರಳ, ಸಜ್ಜನ ಹಾಗೂ ಪರೋಪಕಾರಿ ವ್ಯಕ್ತಿತ್ವವದ ಹಲವು ಉಧಾರಣೆಗಳನ್ನು ನೆನಪಿಸಿ ಈ ಅಜಾತಶತ್ರುವಿಗೆ ಶ್ರಧಾಂಜಲಿ ಕೋರಿದರು.

ಸಾಲ್ವಡೊರ್ ನೊರೊನ್ಹಾರವರು, ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಗೆ ನೀಡಿದ ಸೇವೆಯನ್ನು ಗುರಿತಿಸಿ , ಕೆಲವೇ ದಿನಗಳಲ್ಲಿ ಕ್ಲಬ್ಬಿನ ಆವರಣದಲ್ಲಿ ಉದ್ಘಾಟನೆ ಹೊಂದಲಿರುವ ಹೊಸ ಈಜು ಕೊಳಕ್ಕೆ ‘ಸಾಲ್ವಡೊರ್ ನೊರೊನ್ಹಾ’ರವರ ಸ್ಮಾರಕವಾಗಿ ನಾಮಕರಿಸುವ ಪ್ರಸ್ತಾಪ ಮಂಡಿಸಲಾಯಿತು. ನೆರೆದಿರುವ ಸರ್ವ ಸದಸ್ಯರು ಈ ಸಲಹೆಯನ್ನು ಸ್ವಾಗತಿಸಿ , ಸರ್ವಾನುಮತಿಯಿಂದ ಒಪ್ಪಿಗೆ ನೀಡಿದರು.

1976 ರಿಂದ 2014 ವರೆಗೆ ಸುಮಾರು ನಾಲ್ಕು ದಶಕಗಳ ಕಾಲ ಎಸ ಎಂ ಎಸ ಕಾಲೇಜಿನಲ್ಲಿ ಸೇವೆ ನೀಡಿದ ನೊರೊನ್ಹಾರವರು  ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲಿ ಒಬ್ಬರು. ಕಳೆದ ಮೇ 19ರಂದು ಕೊರೊನ ರೋಗದಿಂದ ಉಂಟಾಗಿರುವ  ಅರೋಗ್ಯ ಸಮಸ್ಯೆಗಳಿಂದ ಅವರು  ನಿಧನ ಹೊಂದಿದರು. 

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ಬಿನ ಕಾರ್ಯದರ್ಶಿಗಳಾಗಿದ್ದ ಗ್ರೆಗೊರಿ ಡಿಸಿಲ್ವರವರು ಮಾತನಾಡಿ ಅಗಲಿದ ಸದಸ್ಯರ ಆತ್ಮಕ್ಕೆ ಶಾಂತಿ ಕೋರಿದರು ಹಾಗೂ ಹಾಜರಿದ್ದ ಎಲ್ಲರಿಗೆ ಧನ್ಯವಾದ ಅರ್ಪಣೆ ಮಾಡಿದರು. ಎರಡು ನಿಮಿಷಗಳ ಮೌನ ಪ್ರಾರ್ಥನೆ ಆಚರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು