11:58 AM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ನಂದಿನಿ ನದಿಗೆ ಮಚ್ಚೂರು ಬಳಿ ನಿರ್ಮಿಸಿದ ನೂತನ ಅಣೆಕಟ್ಟಿಗೆ ಚಾಲನೆ: ಗಂಗಾಪೂಜೆ ಮೂಲಕ ಶಾಸಕ ಡಾ. ಭರತ್ ಶೆಟ್ಟಿ ಲೋಕಾರ್ಪಣೆ

15/01/2023, 20:35

ಸುರತ್ಕಲ್(reporterkarnataka.com): ಸುಮಾರು 4 ಕೋಟಿ ರೂಪಾಯಿ ವೆಚ್ಚದಲ್ಲಿ ನಂದಿನಿ ನದಿಗೆ ಅಡ್ಡವಾಗಿ ಮಚ್ಚೂರು ಕಾನ ಶ್ರೀ ರಾಮ ಮಂದಿರ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ನೂತನ ಅಣೆಕಟ್ಟನ್ನು ನಂದಿನಿ ನದಿಗೆ ಪೂಜೆ ಸಲ್ಲಿಸುವ ಮೂಲಕ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಲೋಕಾರ್ಪಣೆಗೊಳಿಸಿದರು.


ಇಳಿ ಸಂಜೆಯ ಗೋಧೂಳಿ ಮುಹೂರ್ತದಲ್ಲಿ ಸಹಸ್ರಾರು ಹಣತೆಯ ಬೆಳಕಿನಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.
ಗ್ರಾಮದ ನಾಗರಿಕರ ಬಹುಕಾಲದ ಕುಡಿಯುವ ನೀರಿನ ಬವಣೆಯನ್ನು ತಗ್ಗಿಸುವ ಮಾದರಿ ಕಾರ್ಯ ಮಾಡಿರುವ ಡಾ. ಭರತ್ ಶೆಟ್ಟಿಯವರನ್ನು ಊರಿನ ಹಿರಿಯರ ಪ್ರಮುಖರ ಉಪಸ್ಥಿತಿಯಲ್ಲಿ ಆರತಿ ಬೆಳಗಿ ಅಭಿನಂದಿಸಲಾಯಿತು.


ಈ ಸಂದರ್ಭದಲ್ಲಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮೋಹಿನಿ, ಉಪಾಧ್ಯಕ್ಷರಾದ ನಾರಾಯಣ ಎ.ಎಸ್ ,ಪಂಚಾಯತ್ ಸದಸ್ಯರಾದ ಜಯಂತಿ ನಾಯ್ಕ್ ,ಸುಮನ , ಪೂರ್ಣಿಮಾ ಹರಿಪ್ರಕಾಶ್ , ಜಯಂತಿ ಶಂಕರ್, ರಾಜನೀಶ್, ಮಾಜಿ ಪಂಚಾಯತ್ ಅಧ್ಯಕ್ಷರಾದ ಪ್ರಕಾಶ್ ಹೆಗ್ಡೆ ,ವೀರಪ್ಪ ಗೌಡ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು