9:07 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ನೀರುಮಾರ್ಗ: ಮೊಡಂಕಾಪು ಕಾರ್ಮೆಲ್ ಕಾಲೇಜಿನ 7 ದಿನಗಳ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

17/01/2023, 21:27

ಚಿತ್ರ/ವರದಿ :ಅನುಷ್ ಪಂಡಿತ್ ಮಂಗಳೂರು
ಬಂಟ್ವಾಳ(reporterkarnataka.com): ಮೊಡಂಕಾಪು ಕಾರ್ಮೆಲ್ ಕಾಲೇಜು ಇದರ 7 ದಿನಗಳ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನೀರುಮಾರ್ಗ ಸಂತ ಲಿಗೋರಿ ಪ್ರಾಥಮಿಕ ಶಾಲೆಯಲ್ಲಿ ಜರುಗಿತು.


ಶಿಬಿರವನ್ನು ಮಂಗಳೂರು ಸಿಟಿ ಟ್ರಾಫಿಕ್ ಎಸಿಪಿ ಗೀತಾ ಕುಲಕರ್ಣಿ ಉದ್ಘಾಟಿದರು.

ಅವರು ಮಾತನಾಡಿ ಈ 7 ದಿನಗಳ ರಾ. ಸೆ. ಯೋ ಶಿಬಿರದಲ್ಲಿ ಶಿಬಿರಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿ ಉದ್ಯೋಗ ಆರಿಸು ವಂತೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ಮಂಗಳೂರಿನ ಜನತೆ ಬುದ್ದಿವಂತರು, ಅತೀ ವಿನಯ ಉಳ್ಳವರು ಸಂಬಂಧಗಳಿಗೆ ಬೆಲೆ ಕೊಡುವಂತವರು ಇಷ್ಟೆಲ್ಲ ಗುಣವನ್ನು ಬೆಳೆಸಿಕೊಂಡವರು ಸರ್ಕಾರಿ ನೌಕರಿಯಲ್ಲಿ ಮಾತ್ರ ಹಿಂದೇಟು ಹಾಕುತ್ತಿದ್ದಾರೆ, ಪೊಲೀಸ್ ಇಲಾಖೆ ಹಾಗೂ ಇನ್ನಿತರ ಇಲಾಖೆಗಳಿಗೆ ಸೇರಿ ತಮ್ಮ ಸೇವೆಯನ್ನು ಸಮಾಜಕ್ಕೆ ನೀಡಿ, ರಾಸೆಯೋ ಸೇವಾ ಯೋಜನೆಯಿಂದಲೇ ಶಿಸ್ತು ಸಮಯ ಪಾಲನೆ ಬೆಳಿಸಿಕೊಂಡು ಪೊಲೀಸ್ ಇಲಾಖೆಗೆ ಸೇರಿ ಎಂದು ಅವರು ಕರೆ ನೀಡಿದರು.
ಪ್ರತಿನಿತ್ಯ ಪತ್ರಿಕೆ ಓದುವ ಹವ್ಯಾಸ ರೂಡಿಸಿಕೊಳ್ಳಿ. ಅನೇಕ ಉದ್ಯೋಗ ಮಾಹಿತಿ ದೊರೆಯುತ್ತದೆ. ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮ ಪಾಲಿಸಿ ನಿಮ್ಮ ಅಮೂಲ್ಯ ಜೀವವನ್ನು, ಉತ್ತಮ ಆರೋಗ್ಯ ಗುಣಮಟ್ಟ ಕಾಪಾಡಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ನೀರುಮಾರ್ಗ ಶ್ರಮಿಕ ಸಂತ ಜೋಸೆಫರ ದೇವಾಲಯದ ಧರ್ಮಗಳು ರೇ. ಫಾ. ಅನಿಲ್ ಕೆನ್ಯೂಟ್ ಡಿಮೇಲ್ಲೋ ಶಿಬಿರಾರ್ಥಿಗಳಿಗೆ ಆಶೀವಾಚನ ನೀಡಿದರು.

ಸಿಸ್ಟರ್. ಡಾ. ಲತಾ ಫೆರ್ನಾಂಡಿಸ್ ಎ. ಸಿ. ಕಾರ್ಯಕ್ರಮ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಶಿಬಿರದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಬೆಳಿಸಿ, ನಿಮ್ಮಲ್ಲಿರುವ ಕೌಶಲ್ಯಗಳನ್ನು ಹೊರತನ್ನಿ ಎಂದರು.
ಹಣದ ಶ್ರೀಮಂತಿಕೆ ಶಾಶ್ವತವಲ್ಲ ಪ್ರತಿಭೆಯ ಶ್ರೀಮಂತಿಕೆ ಶಾಶ್ವತ. ಶಿಬಿರದ ಸದುಪಯೋಗಪಡೆದು ಕೊಳ್ಳಿ ಎಂದು ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ನೀರುಮಾರ್ಗ ಗ್ರಾಮ ಪಂಚಾಯತ್ ಅಧ್ಯಕ್ಷೆ ಧನವಂತಿ ವೇಣುಗೋಪಾಲ್, ಸಂತ ಲೆಗೋರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಮೋಲಿ ಎಫ್ ಕ್ರ್ಯಾಸ್ತ, ಅಡ್ಯಾರ್ ಪದವು ದಾರು ಸ್ಸಲಾಂ ಮದ್ರಸ ಮುಖ್ಯೋಪಾಧ್ಯಾಯ ಅಬ್ದುಲ್ ಸತ್ತಾರ್ ಸಖಾಫಿ, ಶ್ರಮಿಕ ಸಂತ ಜೋಸೆಫರ ಚರ್ಚ್ ಪಾಲನಾ ಮಂಡಳಿ ಉಪಾಧ್ಯಕ್ಷ ಪ್ರಾನ್ಸಿಸ್ ಗೊನ್ಸಾಲ್ವಿಸ್, ಅಡ್ಯಾರ್ ಪದವು ಹೋಲಿ ಕ್ರಾಸ್ ಕಾನ್ವೆಂಟ್ ಸುಪಿರಿಯರ್ ವಂ.ಭ.ಸುಜಾತ, ಡೆಸಾ, ಯೋಜನಾಧಿಕಾರಿ ಕೀರ್ತನ್ ಜಿ.ನಾಯ್ಕ್, ಸಹ ಯೋಜನಾಧಿಕಾರಿ ವಿಜೇತ
ಕುಲಾಲ್ ಹಾಗೂ ಶಿಕ್ಷಕವೃಂದ, ಸ್ವಯಂ ಸೇವಕ, ಸೇವಕಿ ನಾಯಕರುಗಳಾದ ಅಕ್ಷಿತ್ ಪೂಜಾರಿ, ಆಸಿಯಾ ಉಪಸ್ಥಿತರಿದ್ದರು.


ಸ್ವಯಂ ಸೇವಕಿಯರಿಂದ ಸ್ವಾಗತ ನೃತ್ಯ ಹಾಗೂ ಪ್ರಾರ್ಥನಾ ಗೀತೆ ಮೊಳಗಿತು.

ಇತ್ತೀಚಿನ ಸುದ್ದಿ

ಜಾಹೀರಾತು