7:42 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಾಫಿನಾಡಿಗೆ ಇಂದು ಮುಖ್ಯಮಂತ್ರಿ ಬೊಮ್ಮಾಯಿ: ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಚಾಲನೆ

18/01/2023, 11:40

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka.com

ಕಾಫಿನಾಡು ಚಿಕ್ಕಮಗಳೂರಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸುವ ಸಿಎಂ ನಂತರ ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವರು. 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆ ವೀಕ್ಷಣೆ ಮಾಡಲಿದ್ದಾರೆ. ಸಿಎಂ ಅವರು
ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿರುವರು.
ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆ‌‌‌ ನೀಡಲಿದ್ದಾರೆ.


ಸಂಜೆ 6ಕ್ಕೆ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡುವರು. ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆ ನಿರ್ಮಿಸಲಾಗಿದೆ. ಕಾರ್ಯಕ್ರಮದ ನಂತರ ಸಿಎಂ
ಬೆಂಗಳೂರು ತೆರಳುವರು.

ಇತ್ತೀಚಿನ ಸುದ್ದಿ

ಜಾಹೀರಾತು