12:06 PM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

2025 ಮಾರ್ಚ್ ಒಳಗೆ ಮಂಗಳೂರು ಸಮಗ್ರ ಚಿತ್ರಣವೇ ಬದಲಾಗಲಿದೆ: ಶಾಸಕ ವೇದವ್ಯಾಸ ಕಾಮತ್

18/01/2023, 19:50

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ (ಎಂಎಸ್‌ಸಿಎಲ್‌), ಮಂಗಳೂರು ಮಹಾನಗರ
ಪಾಲಿಕೆ ಹಾಗೂ ಸರ್ಕಾರದ ಅನುದಾನದ ಕಾಮಗಾರಿಗಳೆಲ್ಲವೂ 2025ರ ಮಾರ್ಚ್‌ವೊಳಗೆ ಪೂರ್ಣಗೊಳ್ಳಲಿದ್ದು, ನಗರದ ಸಮಗ್ರ ಚಿತ್ರಣವೇ ಬದಲಾಗಲಿದೆ’ ಎಂದು ಶಾಸಕ ಡಿ. ವೇದವ್ಯಾಸ
ಕಾಮತ್ ಹೇಳಿದರು.

ನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಲ್ಕೂವರೆ ವರ್ಷಗಳಲ್ಲಿ 4,750 ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ, ಕೈಗೆತ್ತಿಕೊಂಡ ಬಹುತೇಕ ಕಾಮಗಾರಿಗಳನ್ನು ನಿರೀಕ್ಷೆಯಂತೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ’ ಎಂದು
ಶಾಸಕರು ನುಡಿದರು.

ವಿವಿಧ ಕಾಮಗಾರಿಗಳನ್ನು 2023 ರ ಮಾರ್ಚ್‌ ಒಳಗೆ ಪೂರ್ಣ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಇದು ಸಾಧ್ಯವಾಗಿಲ್ಲ. ಮೂರು ವರ್ಷ ಮಳೆಗಾಲದಲ್ಲಿ ಉಂಟಾದ ಪ್ರವಾಹಗಳು, ಎರಡು ವರ್ಷ ಕೋವಿಡ್‌ ಕಾರಣದಿಂದ ಕಾಮಗಾರಿ ವಿಳಂಬವಾಗಿವೆ ಎಂದು ತಿಳಿಸಿದರು.
‘ಜಲಸಿರಿ ಯೋಜನೆ ಅಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸುತ್ತಿದ್ದೇವೆ. ಪ್ರಸ್ತುತ ತುಂಬೆಯಿಂದ ನಗರಕ್ಕೆ ಪೂರೈಕೆಯಾಗುವ ನೀರಿನಲ್ಲಿ ಶೇ 40 ರಿಂದ ಶೇ 50ರಷ್ಟು ಸೋರಿಕೆ ಆಗುತ್ತಿದೆ. ಅದನ್ನು ಪತ್ತೆ ಹಚ್ಚಲೂ ಸಾಧ್ಯವಾಗುತ್ತಿಲ್ಲ. ಜಲಸಿರಿ ಯೋಜನೆ ಅಡಿ ನಗರದಲ್ಲಿ ಕುಡಿವ ನೀರು ಪೂರೈಕೆ ಎಲ್ಲ ಕೊಳವೆಗಳನ್ನು ಬದಲಾಯಿಸುತ್ತಿದ್ದೇವೆ. ಈ ಯೋಜನೆ ಪೂರ್ಣಗೊಂಡ ಬಳಿಕ ನೀರು ಸೋರಿಕೆ ಪ್ರಮಾಣ ಶೇ 8ಕ್ಕಿಂತ ಕಡಿಮೆ ಆಗಲಿದೆ ಎಂದು ಹೇಳಿದರು.
ಜಲಸಾರಿಗೆ ಮಂಡಳಿ (ಮೆರಿಟೈಮ್‌ ಬೋರ್ಡ್‌) ಮೂಲಕ ಮೀನುಗಾರಿಕಾ ಬಂದರಿನ ಡಕ್ಕೆಯ ಮೂರನೇ ಹಂತದ ಅಭಿವೃದ್ಧಿಗೆ ₹ 49 ಕೋಟಿ ಅನುದಾನ ಬಿಡುಗಡೆಯಾಗಿದೆ. 7 ಮೀಟರ್ ಆಳದವರೆಗೆ ಹೂಳೆತ್ತುವ ಕಾಮಗಾರಿಯನ್ನು ₹ 29 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಿಂದ ಭಾರಿ ಗಾತ್ರದ ಹಡಗುಗಳೂ ಮೀನುಗಾರಿಕಾ ಬಂದರಿಗೆ ಬರುವುದಕ್ಕೆ ಅವಕಾಶ ಸಿಗಲಿದೆ’ ಎಂದರು.
‘ಎರಡು ಕುದ್ರುಗಳನ್ನು ₹20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹೊಯ್ಗೆ ಬಜಾರ್‌ನಿಂದ ನೇತ್ರಾವತಿ ನದಿಯಲ್ಲಿ ಸಾಗಿ ಕೂಳೂರುವರೆಗೆ ತಲುಪುವ ಬಾರ್ಜ್‌ ಪ್ರಯಾಣ ಆರಂಭಿಸಲಿದ್ದೇವೆ. ಇದರಿಂದ ಜನರ ಓಡಾಟ ಮತ್ತು ವಾಹನಗಳ ಸಾಗಾಟಕ್ಕೂ ಅವಕಾಶ ಸಿಗಲಿದೆ. ಈ ಜಲಮಾರ್ಗದಲ್ಲಿ ಬೋಟ್‌ ನಿಲುಗಡೆಗಾಗಿ ಐದು ಕಡೆ ಸಣ್ಣ ಜೆಟ್ಟಿ ನಿರ್ಮಿಸಲಾಗುತ್ತದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು