6:26 AM Wednesday14 - January 2026
ಬ್ರೇಕಿಂಗ್ ನ್ಯೂಸ್
ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಇತ್ತೀಚಿನ ಸುದ್ದಿ

2025 ಮಾರ್ಚ್ ಒಳಗೆ ಮಂಗಳೂರು ಸಮಗ್ರ ಚಿತ್ರಣವೇ ಬದಲಾಗಲಿದೆ: ಶಾಸಕ ವೇದವ್ಯಾಸ ಕಾಮತ್

18/01/2023, 19:50

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ (ಎಂಎಸ್‌ಸಿಎಲ್‌), ಮಂಗಳೂರು ಮಹಾನಗರ
ಪಾಲಿಕೆ ಹಾಗೂ ಸರ್ಕಾರದ ಅನುದಾನದ ಕಾಮಗಾರಿಗಳೆಲ್ಲವೂ 2025ರ ಮಾರ್ಚ್‌ವೊಳಗೆ ಪೂರ್ಣಗೊಳ್ಳಲಿದ್ದು, ನಗರದ ಸಮಗ್ರ ಚಿತ್ರಣವೇ ಬದಲಾಗಲಿದೆ’ ಎಂದು ಶಾಸಕ ಡಿ. ವೇದವ್ಯಾಸ
ಕಾಮತ್ ಹೇಳಿದರು.

ನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾಲ್ಕೂವರೆ ವರ್ಷಗಳಲ್ಲಿ 4,750 ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ, ಕೈಗೆತ್ತಿಕೊಂಡ ಬಹುತೇಕ ಕಾಮಗಾರಿಗಳನ್ನು ನಿರೀಕ್ಷೆಯಂತೆ ಪೂರ್ಣಗೊಳಿಸಲು ಸಾಧ್ಯವಾಗಿಲ್ಲ’ ಎಂದು
ಶಾಸಕರು ನುಡಿದರು.

ವಿವಿಧ ಕಾಮಗಾರಿಗಳನ್ನು 2023 ರ ಮಾರ್ಚ್‌ ಒಳಗೆ ಪೂರ್ಣ ಮಾಡಬೇಕು ಎಂದುಕೊಂಡಿದ್ದೆ. ಆದರೆ, ಇದು ಸಾಧ್ಯವಾಗಿಲ್ಲ. ಮೂರು ವರ್ಷ ಮಳೆಗಾಲದಲ್ಲಿ ಉಂಟಾದ ಪ್ರವಾಹಗಳು, ಎರಡು ವರ್ಷ ಕೋವಿಡ್‌ ಕಾರಣದಿಂದ ಕಾಮಗಾರಿ ವಿಳಂಬವಾಗಿವೆ ಎಂದು ತಿಳಿಸಿದರು.
‘ಜಲಸಿರಿ ಯೋಜನೆ ಅಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸುತ್ತಿದ್ದೇವೆ. ಪ್ರಸ್ತುತ ತುಂಬೆಯಿಂದ ನಗರಕ್ಕೆ ಪೂರೈಕೆಯಾಗುವ ನೀರಿನಲ್ಲಿ ಶೇ 40 ರಿಂದ ಶೇ 50ರಷ್ಟು ಸೋರಿಕೆ ಆಗುತ್ತಿದೆ. ಅದನ್ನು ಪತ್ತೆ ಹಚ್ಚಲೂ ಸಾಧ್ಯವಾಗುತ್ತಿಲ್ಲ. ಜಲಸಿರಿ ಯೋಜನೆ ಅಡಿ ನಗರದಲ್ಲಿ ಕುಡಿವ ನೀರು ಪೂರೈಕೆ ಎಲ್ಲ ಕೊಳವೆಗಳನ್ನು ಬದಲಾಯಿಸುತ್ತಿದ್ದೇವೆ. ಈ ಯೋಜನೆ ಪೂರ್ಣಗೊಂಡ ಬಳಿಕ ನೀರು ಸೋರಿಕೆ ಪ್ರಮಾಣ ಶೇ 8ಕ್ಕಿಂತ ಕಡಿಮೆ ಆಗಲಿದೆ ಎಂದು ಹೇಳಿದರು.
ಜಲಸಾರಿಗೆ ಮಂಡಳಿ (ಮೆರಿಟೈಮ್‌ ಬೋರ್ಡ್‌) ಮೂಲಕ ಮೀನುಗಾರಿಕಾ ಬಂದರಿನ ಡಕ್ಕೆಯ ಮೂರನೇ ಹಂತದ ಅಭಿವೃದ್ಧಿಗೆ ₹ 49 ಕೋಟಿ ಅನುದಾನ ಬಿಡುಗಡೆಯಾಗಿದೆ. 7 ಮೀಟರ್ ಆಳದವರೆಗೆ ಹೂಳೆತ್ತುವ ಕಾಮಗಾರಿಯನ್ನು ₹ 29 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ. ಇದರಿಂದ ಭಾರಿ ಗಾತ್ರದ ಹಡಗುಗಳೂ ಮೀನುಗಾರಿಕಾ ಬಂದರಿಗೆ ಬರುವುದಕ್ಕೆ ಅವಕಾಶ ಸಿಗಲಿದೆ’ ಎಂದರು.
‘ಎರಡು ಕುದ್ರುಗಳನ್ನು ₹20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹೊಯ್ಗೆ ಬಜಾರ್‌ನಿಂದ ನೇತ್ರಾವತಿ ನದಿಯಲ್ಲಿ ಸಾಗಿ ಕೂಳೂರುವರೆಗೆ ತಲುಪುವ ಬಾರ್ಜ್‌ ಪ್ರಯಾಣ ಆರಂಭಿಸಲಿದ್ದೇವೆ. ಇದರಿಂದ ಜನರ ಓಡಾಟ ಮತ್ತು ವಾಹನಗಳ ಸಾಗಾಟಕ್ಕೂ ಅವಕಾಶ ಸಿಗಲಿದೆ. ಈ ಜಲಮಾರ್ಗದಲ್ಲಿ ಬೋಟ್‌ ನಿಲುಗಡೆಗಾಗಿ ಐದು ಕಡೆ ಸಣ್ಣ ಜೆಟ್ಟಿ ನಿರ್ಮಿಸಲಾಗುತ್ತದೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು