12:28 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು