4:12 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು