8:32 PM Wednesday1 - April 2026
ಬ್ರೇಕಿಂಗ್ ನ್ಯೂಸ್
ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು