5:54 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಖಾಸಗಿ ಬಸ್ ದರ ಏರಿಕೆ ವಾಪಸ್ : ಹಳೆಯ ದರ ವಸೂಲಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚನೆ

06/07/2021, 18:02

ಮಂಗಳೂರು(reporterkarnataka news):

ಕೊರೊನಾ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡಿ ಪ್ರಯಾಣಿಕರ ಒಯ್ಯುವ ಹಾಗೂ ತೈಲ ಬೆಲೆಯೇರಿಕೆ ನೆಪವೊಡ್ಡಿ ಹೆಚ್ಚಿಸಲಾದ ಖಾಸಗಿ ಬಸ್ ದರವನ್ನು ಹಿಂಪಡೆಲಾಗಿದೆ.

ಆರ್ ಟಿಎ ಸಭೆ ನಡೆಯುವ ವರೆಗೆ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾಪ ತಡೆಯಲಾಗಿದೆ ಎಂದು  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ. ವಿ. ಹೇಳಿದ್ದಾರೆ.

ಲಾಕ್ ಡೌನ್ ಮಾರ್ಗಸೂಚಿ ಸಡಿಲಿಕೆಗೊಂಡು ಶೇ. 100ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ಖಾಸಗಿ ಬಸ್ ದರ ಏರಿಕೆ ಪ್ರಸ್ತಾಪ ಹಿಂಪಡೆಯಲಾಗಿದೆ. ಶೇ. 50ರಷ್ಟು ಪ್ರಯಾಣಿಕರನ್ನು ಕರೆದೊಯ್ದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣಕ್ಕಾಗಿ ಖಾಸಗಿ ಬಸ್ ಗಳ ಪ್ರಯಾಣ ದರವನ್ನು ಜು. 1ರಿಂದ ಅನ್ವಯವಾಗುವಂತೆ ಶೇ. 20ರಷ್ಟು ಹೆಚ್ಚಿಸಲಾಗಿತ್ತು. ಲಾಕ್ ಡೌನ್ ಅವಧಿ ವರೆಗೆ ಈ ದರ ಪಡೆಯುವಂತೆ ಬಸ್ ಮಾಲಕರಿಗೆ ಸೂಚಿಸಲಾಗಿತ್ತು. ಇದೀಗ ಲಾಕ್ ಡೌನ್ ಸಡಿಲಿಕೆ ಆಗಿರುವ ಕಾರಣ ಬಸ್ ಗಳಲ್ಲಿ ಹಳೆಯ ದರವನ್ನೇ ಪಡೆಯಬೇಕು ಎಂದು ಜಿಲ್ಲಾಧಿಕಾರ ತಿಳಿಸಿದ್ದಾರೆ.

ಮುಂದಿನ ಒಂದು ವಾರದೊಳಗೆ ಆರ್.ಟಿ.ಎ ಸಭೆ ನಡೆಸಲಾಗುವುದು. ಸಭೆಯಲ್ಲಿ ದರ ಏರಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಖಾಸಗಿ ಬಸ್ ಮಾಲಕರೊಂದಿಗೆ ಈ ಕುರಿತು ಸಭೆ ನಡೆಸಲಾಗಿದ್ದು, ದರ ಏರಿಕೆ ಹಿಂಪಡೆಯಲು ಬಸ್ ಮಾಲಕರು ಒಪ್ಪಿಕೊಂಡಿದ್ದಾರೆ. ಬಸ್ ಪ್ರಯಾಣ ದರ ಏರಿಕೆ ಮಾಡಬೇಕು ಎಂಬುದು ಬಸ್ ಮಾಲಕರ ಬೇಡಿಕೆಯಾಗಿದೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು