6:05 AM Saturday7 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಪಪಂ ಸಭೆ: ಮೂಲಭೂತ ಸೌಕರ್ಯಗಳಿಗೆ ಆಧ್ಯತೆ, ವಸತಿ ಯೋಜನೆಯಲ್ಲಿ ಪಾರದರ್ಶಕತೆಗೆ ಸೂಚನೆ

20/01/2023, 15:36

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterKarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ಸಭೆ, ಜ19ರಂದು ಪಪಂ ಸಭಾಂಗಣದಲ್ಲಿ ಜರುಗಿತು. ಸಭೆಯಲ್ಲಿ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳನ್ನು, ಸಾರ್ವಜನಿಕರಿಗೆ ಸಮರ್ಪಕವಾಗಿ ಒದಗಿಸಲು ಆಧ್ಯತೆ ನೀಡುವಂತೆ ಅದಿಕಾರಿಗೆ ಸದಸ್ಯರು ತಾಕೀತು ಮಾಡಿದರು. ವಸತಿ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳ ಅನುಷ್ಠಾನದಲ್ಲಿ, ಎಲ್ಲಾ ಹಂತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಬೇಕಿದೆ. ಉತ್ತಮ ಗುಣ ಮಟ್ಟದಲ್ಲಿ ಮನೆಗಳನ್ನು ನಿರ್ಮಾಣ ಮಾಡುಂತೆ, ಅಗತ್ಯ ಕ್ರಮಕ್ಕಾಗಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಸುಮಾರು 16ಕ್ಕೂ ಹೆಚ್ಚು ವಿಷಯಗಳಿಗೆ ಅನುಮೋದನೆ, ಕಾಮಗಾರಿಗಳಿಗೆ ಪ್ರಸ್ಥಾವನೆಗಳ ಕುರಿತು ಚರ್ಚಿಸಲಾಯಿತು. ಕುಡಿಯೋ ನೀರು ಸಮಸ್ಯೆ ಉಲ್ಬಣವಾಗದಂತೆ, ಹಾಗೂ ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗ್ರತೆ ವಹಿಸುವಂತೆ ಸರ್ವ ಸದಸ್ಯರು ಒತ್ತಾಯಿಸಿದರು. ಸಭೆಯಲ್ಲಿ ಅಧ್ಯಕ್ಷೆ ಎಮ್.ಶಾರದಾಬಾಯಿ ಅಧ್ಯಕ್ಷತೆಯಲ್ಲಿ ಜರುಗಿತು, ಉಪಧ್ಯಕ್ಷೆ ರೇಣುಕಾ, ಸ್ಥಾಯಿ ಸಮಿತಿ ಅಧ್ಯಕ್ಷ ಪೂರ್ಯಾನಾಯ್ಕ, ಮುಖ್ಯಾಧಿಕಾರಿ ಫಿರೋಜ್ ಖಾನ್ ವೇದಿಕಯಲ್ಲಿದ್ದರು. ಸರ್ವ ಹಾಗೂ ನಾಮ ನಿರ್ದೇಶಿತ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು