2:58 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಗತ್ಯ ಮೂಲ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರಕಾರ ಸದಾ ಸಿದ್ದ: ಶಾಸಕ ವೇದವ್ಯಾಸ ಕಾಮತ್

20/01/2023, 22:18

ಮಂಗಳೂರು(reporterkarnataka.com): ರೈತರ ಅಭ್ಯುದಯಕ್ಕಾಗಿ ಕೃಷಿ ಇಲಾಖೆಯಿಂದ ಸರ್ಕಾರ ರೂಪಿಸುವ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಗತ್ಯವಿರುವ ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಸದಾ ಸಿದ್ಧವಿದ್ದು, ಆ ದಿಸೆಯಲ್ಲಿ ಜಿಲ್ಲೆಯ ಸಮಗ್ರ ಕೃಷಿ ಪದ್ದತಿ ಉತ್ಕøಷ್ಟತಾ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ನಬಾರ್ಡ್ ವತಿಯಿಂದ ಪಡೀಲು ಸಮೀಪದ ಅಳಪೆ ಗ್ರಾಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಕೃಷಿ ಪದ್ಧತಿ ಉತ್ಕøಷ್ಟತಾ ಕೇಂದ್ರದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಮಂಗಳೂರಿನ ಹೃದಯ ಭಾಗದಲ್ಲಿ ಅಂದಾಜು 13,000 ಚದರ ಅಡಿಯಲ್ಲಿ 3.88 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬೃಹತ್ ಸುಸಜ್ಜಿತ ಕಟ್ಟಡವನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ ಅವರು, ಈ ಕಟ್ಟಡ ನಿರ್ಮಾಣದಿಂದ ಜಿಲ್ಲೆಯ ಕೃಷಿಕರಿಗೆ ಸಾಕಷ್ಟು ಅನುಕೂಲಗಳಾಗಲಿವೆ, ಜಿಲ್ಲೆಯಲ್ಲಿ ಸಾಕಷ್ಟು ಸಣ್ಣ ಸಣ್ಣ ಕೃಷಿಕರಿದ್ದು ಅವರ ಕೃಷಿ ಚಟುವಟಿಕೆಗಳಿಗೆ ಪೂರಕ ಕ್ರಮಗಳ ಕೈಗೊಳ್ಳುವ ಸಂಶೋಧನೆ, ಲ್ಯಾಬೋರೇಟರಿ, ಯಾವ ಮಣ್ಣಿನಲ್ಲಿ ಯಾವ ರೀತಿಯ ಬೆಳೆಗಳನ್ನು ಬೆಳೆಯ ಬೇಕು ಎನ್ನುವ ಬಗ್ಗೆ ತರಬೇತಿ, ರೈತರಿಗೆ ಆದಾಯ ತಂದು ಕೊಡುವ ಬೆಳೆಗಳ ಬಗ್ಗೆ ಚರ್ಚೆಗಳು ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ಸೆಮಿನಾರ್ ಹಾಲ್, ಎಕ್ಸಿಬಿಷನ್ ಹಾಲ್‍ಗಳ ನಿರ್ಮಾಣವಾಗಲಿದೆ ಎಂದರು.


ಕೃಷಿಕರ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರವು ಸಾಕಷ್ಟು ಯೋಜನೆಗಳನ್ನು ರೂಪಿಸಿವೆ, ಮುಖ್ಯವಾಗಿ ಪ್ರಧಾನಮಂತ್ರಿಗಳು ಕೃಷಿ ಸಮ್ಮಾನ್ ಯೋಜನೆಯಡಿ 6,000 ರೂ.ಗಳನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಿ ಪ್ರೋತ್ಸಾಹಿಸುತ್ತಿದ್ದಾರೆ, ಅದರಂತೆ ರಾಜ್ಯ ಸರ್ಕಾರವು ಆರು ಸಾವಿರದೊಂದಿಗೆ 4,000 ರೂ.ಗಳನ್ನು ಸೇರಿಸಿ ಒಟ್ಟು 10 ಸಾವಿರ ರೂ.ಗಳನ್ನು ರೈತರಿಗೆ ನೀಡಿ ಪ್ರೋತ್ಸಾಹಿಸಲಾಗುತ್ತಿದೆ, ರೈತರ ಖಾತೆಗೆ ಸರ್ಕಾರದಿಂದ ನೇರವಾಗಿ ಹಣ ಬಿಡುಗಡೆ ಮಾಡುವ ವ್ಯವಸ್ಥೆ ಈ ಹಿಂದೆ ಇರಲಿಲ್ಲ, ಈ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದವಾಗದಂತೆ ಕೃಷಿ ಸಮ್ಮಾನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಮಹಾನಗರ ಪಾಲಿಕೆ ಸದಸ್ಯ ಸಂದಿಪ್ ಗರೋಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಸೀತಾ ಎಂ.ಸಿ., ಕರ್ನಾಟಕ ಗೃಹ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರಾದ ಮಂಗಳಾ ಸೇರಿದಂತೆ ಹಲವು ಗಣ್ಯರು ವೇದಿಕೆಯಲ್ಲಿದ್ದರು.

ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಭಾರತಮ್ಮ ಜಿ.ಯು. ಸ್ವಾಗತಿಸಿದರು. ಮಂಗಳೂರು ತಾಲೂಕು ಸಹಾಯಕ ನಿರ್ದೇಶಕರಾದ ವೀಣಾ ಕೆಆರ್ ನಿರೂಪಿಸಿದರು. ಶಶಿಕಲಾ ಪ್ರಾರ್ಥಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು