2:10 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಡಿಯಾಲಬೈಲ್ ವಾರ್ಡ್: 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಚಾಲನೆ

20/01/2023, 22:46

ಮಂಗಳೂರು(reporterkarnataka.com) ಮಹಾನಗರ ಪಾಲಿಕೆಯ ಕೊಡಿಯಾಲಬೈಲ್ ವಾರ್ಡಿನ ಶ್ರೀದೇವಿ ಕಾಲೇಜಿನ ಬಳಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಬಲ್ಲಾಳ್ ಭಾಗ್ ಶ್ರೀದೇವಿ ಕಾಲೇಜಿನಿಂದ ಕೆ.ಎಸ್.ಆರ್.ಟಿ.ಸಿ ಮುಖ್ಯರಸ್ತೆ ಸಂಪರ್ಕಿಸುವ ರಸ್ತೆಯನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಲು ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಂಡಿದ್ದು ಸ್ಥಳೀಯರ ಸಹಕಾರದಿಂದ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವ ಭರವಸೆಯಿದೆ ಎಂದು ಹೇಳಿದರು.

ಸ್ಥಳೀಯ ಕಾರ್ಪೋರೇಟರ್ ಸುಧೀರ್ ಶೆಟ್ಟಿ ಮಾತನಾಡಿ,ಕೊಡಿಯಾಲಬೈಲ್ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕರ ಕೊಡುಗೆ ಅಪಾರವಾಗಿದೆ. ಜನರ ಬೇಡಿಕೆಗಳಿಗೆ ತ್ವರಿತವಾಗಿ‌ ಸ್ಪಂದಿಸುವ ಮೂಲಕ ವಾರ್ಡಿನ ಸಮಗ್ರ ಅಭಿವೃದ್ಧಿಗೆ ಸದಾ ಸಹಕಾರ ನೀಡುತಿದ್ದಾರೆ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ‌ ಕಾವಾ, ಕಿಶೋರ್ ಕೊಟ್ಟಾರಿ, ಮುಖಂಡರಾದ ಗಂಗಾಧರ್, ಚಂದ್ರಶೇಖರ್, ಲೋಕನಾಥ್ ಶೆಟ್ಟಿ, ಪ್ರಶಾಂತ್ ಆಳ್ವ, ಜಗನಾಥ ಶೆಟ್ಟಿ, ಭಾರತೀ ಶೆಟ್ಟಿ, ಯಶವಂತ್ ಕುದ್ರೋಳಿ, ವಿವೇಕ್ ದೇವಾಡಿಗ, ವಸಂತ್ ಜೆ. ಪೂಜಾರಿ, ಸದಾಶಿವ ಕುಲಾಲ್, ನವೀನ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು