4:04 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕಾಂಗ್ರೆಸಿಗರು ಜನ ಸೇರಿಸೋದು, ಮೋದಿಗೆ ಜನ ಸೇರೋದು: ಪ್ರಜಾಧ್ವನಿ ಯಾತ್ರೆಗೆ ಸಿ.ಟಿ. ರವಿ ಟೀಕೆ

21/01/2023, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ಜಿಮೈಲ್

ಕಾಂಗ್ರೆಸ್ಸಿಗರು ಜನ ಸೇರಿಸೋದು, ಪ್ರಧಾನಿ ಮೋದಿಗೆ ಜನ ಸೇರೋದು ಎಂದು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಮೋದಿ ಬರ್ತಾರೆ ಅಂದ್ರೆ ಲಕ್ಷ-ಲಕ್ಷ ಜನ ಸೇರುತ್ತಾರೆ, ಸೇರೋದಕ್ಕೂ, ಸೇರ್ಸೋದಕ್ಕೂ ವ್ಯತ್ಯಾಸವಿದೆ.

ಸೇರ್ಸೋದು ಹಲವು ಕಾರಣಕ್ಕೆ, ಸೇರೋದು ಪ್ರೀತಿಗೆ ಮಾತ್ರ ಎಂದರು.
ಪ್ರಜೆಗಳ ಬಲ ಮೋದಿಯವರ ಜೊತೆ ಇದೆ.
ಆದರೆ, ಕಾಂಗ್ರೆಸ್ ಪ್ರಜೆಗಳ ಧ್ವನಿಯನ್ನ ಅವರು ಕೇಳಬೇಕು, ಅವರ ಧ್ವನಿಯನ್ನ ಪ್ರಜೆಗಳಿಗೆ ಕೇಳಿಸುತ್ತಿದ್ದಾರೆ. ಪಿ.ಎಫ್.ಐ. ಕಾರ್ಯಕರ್ತರನ್ನ ಬಿಟ್ಟಿದ್ದು, ಅಮಾಯಕರ ಹತ್ಯೆಯಾಗಿದ್ದು, ರಿಡ್ಯೂ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದದ್ದು ಜನ ಅವರ ಸಾಧನೆಯನ್ನ ಪಿಸುಗುಡುತ್ತಿಲ್ಲ, ಕೂಗಿ-ಕೂಗಿ ಹೇಳ್ತಿದ್ದಾರೆ ಎಂದರು.
ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ನಮ್ಮ ಪ್ರಶ್ನೆಗೆ ನೇರವಾಗಿ ಉತ್ತರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿ ಚುನಾವಣೆಯಲ್ಲಿ ಕೇಳುತ್ತದೆ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು