1:59 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು

ಇತ್ತೀಚಿನ ಸುದ್ದಿ

ಕಾಂಗ್ರೆಸಿಗರು ಜನ ಸೇರಿಸೋದು, ಮೋದಿಗೆ ಜನ ಸೇರೋದು: ಪ್ರಜಾಧ್ವನಿ ಯಾತ್ರೆಗೆ ಸಿ.ಟಿ. ರವಿ ಟೀಕೆ

21/01/2023, 21:18

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@ಜಿಮೈಲ್

ಕಾಂಗ್ರೆಸ್ಸಿಗರು ಜನ ಸೇರಿಸೋದು, ಪ್ರಧಾನಿ ಮೋದಿಗೆ ಜನ ಸೇರೋದು ಎಂದು ಕಾಂಗ್ರೆಸ್ಸಿನ ಪ್ರಜಾಧ್ವನಿ ಯಾತ್ರೆಗೆ ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು,
ಮೋದಿ ಬರ್ತಾರೆ ಅಂದ್ರೆ ಲಕ್ಷ-ಲಕ್ಷ ಜನ ಸೇರುತ್ತಾರೆ, ಸೇರೋದಕ್ಕೂ, ಸೇರ್ಸೋದಕ್ಕೂ ವ್ಯತ್ಯಾಸವಿದೆ.

ಸೇರ್ಸೋದು ಹಲವು ಕಾರಣಕ್ಕೆ, ಸೇರೋದು ಪ್ರೀತಿಗೆ ಮಾತ್ರ ಎಂದರು.
ಪ್ರಜೆಗಳ ಬಲ ಮೋದಿಯವರ ಜೊತೆ ಇದೆ.
ಆದರೆ, ಕಾಂಗ್ರೆಸ್ ಪ್ರಜೆಗಳ ಧ್ವನಿಯನ್ನ ಅವರು ಕೇಳಬೇಕು, ಅವರ ಧ್ವನಿಯನ್ನ ಪ್ರಜೆಗಳಿಗೆ ಕೇಳಿಸುತ್ತಿದ್ದಾರೆ. ಪಿ.ಎಫ್.ಐ. ಕಾರ್ಯಕರ್ತರನ್ನ ಬಿಟ್ಟಿದ್ದು, ಅಮಾಯಕರ ಹತ್ಯೆಯಾಗಿದ್ದು, ರಿಡ್ಯೂ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಹೊಡೆದದ್ದು ಜನ ಅವರ ಸಾಧನೆಯನ್ನ ಪಿಸುಗುಡುತ್ತಿಲ್ಲ, ಕೂಗಿ-ಕೂಗಿ ಹೇಳ್ತಿದ್ದಾರೆ ಎಂದರು.
ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ನಮ್ಮ ಪ್ರಶ್ನೆಗೆ ನೇರವಾಗಿ ಉತ್ತರಿಸುವ ಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರಜೆಗಳ ಧ್ವನಿ ಚುನಾವಣೆಯಲ್ಲಿ ಕೇಳುತ್ತದೆ ಎಂದು ಸಿ.ಟಿ.ರವಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು