8:43 AM Wednesday17 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು