6:39 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು