7:48 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

Mangalore | ವಿಮಾನ ಹಾರುವ ರನ್‌ವೇಗೆ ಅಚಾನಕ್ ಆಗಿ ನುಗ್ಗಿದ ಲಾರಿ ಕ್ಲೀನರ್ : ಸಿಐಎಸ್‌ಎಫ್ ಸಿಬ್ಬಂದಿಗಳಿಂದ ಬಂಧನ

06/07/2021, 18:27

ಮಂಗಳೂರು (reporterkarnataka news): ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದವಾಗಿ ವ್ಯಕ್ತಿಯೊಬ್ಬ ಪ್ರವೇಶಿಸಿದ್ದು, ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್ ) ಸಿಬ್ಬಂದಿಗಳು ಪೊಲೀಸರಿಗೊಪ್ಪಿಸಿದ್ದಾರೆ. ನಂತರ ಈತ ದಾರಿ ತಪ್ಪಿ ಪ್ರವೇಶಿಸಿದ ಹೊರ ರಾಜ್ಯದ ಲಾರಿ ಕ್ಲಿನರ್ ಎಂದು ತಿಳಿದು ಬಂದಿದೆ.

ಸೋಮವಾರ ರಾತ್ರಿ 11ರ ವೇಳೆಗೆ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ವಿಭಾಗದಲ್ಲಿ‌ ರನ್ ವೇ ಕಾಮಗಾರಿ ನಡೆಯುತ್ತಿತ್ತು. ಆ ವೇಳೆಯಲ್ಲಿ ಅಪರಿಚಿತ ವ್ಯಕ್ತಿ ಅಕ್ರಮವಾಗಿ ಪ್ರವೇಶಿಸಿರುವುದು ಕಂಡು ಬಂತು. ತಕ್ಷಣ ಆತನನ್ನು ಗಸ್ತು ತಿರುಗುತ್ತಿದ್ದ ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಬಜಪೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಅನಧಿಕೃತವಾಗಿ ನುಗ್ಗಿದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದು, ಪಶ್ಚಿಮ ಬಂಗಾಲದ ಮುರ್ಸಿದಾಬಾದ್ ನ ಬಧುಹಾ ಗ್ರಾಮ ದ ನಿವಾಸಿ ರಾಕೇಶ್ ಎಂದು ಹೇಳಿಕೊಂಡಿದ್ದಾನೆ. ಈತ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು, ತನ್ನ ಜೊತೆ ಇದ್ದ ಲಾರಿ ಡ್ರೈವರ್ ತನಗೆ ಸಂಬಳ ನೀಡದೆ ಇಲ್ಲೇ ಸಮೀಪದಲ್ಲಿ ಬಿಟ್ಟು ಹೋಗಿದ್ದು ದಾರಿ ಕಾಣದೇ ವಿಮಾನ ನಿಲ್ದಾಣ ಎಂದು ತಿಳಿಯದೇ ಈ ಭಾಗಕ್ಕೆ ಬಂದಿರುತ್ತೇನೆ ಎಂದು ವಿಚಾರಣೆ ವೇಳೆ ತಿಳಿಸಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು